ಬೆಳ್ತಂಗಡಿ: ಸಾರ್ವಜನಿಕರೇ ಆರೋಪಿಯನ್ನು ಥಳಿಸಿ ಕೊಂದು ಹಾಕಿದ್ರು
ಮಂಗಳೂರು,ಫೆಬ್ರವರಿ,16: ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಸಾರ್ವಜನಿಕರು ಥಳಿಸಿ ಹತ್ಯೆ ಮಾಡಿದ ಅಮಾನುಷ ಘಟನೆ ಚಾರ್ಮಾಡಿ ಗ್ರಾಮ ಪಂಚಾಯತು ವ್ಯಾಪ್ತಿಯ ತೋಟ ತ್ತಾಡಿಯ ಕುತ್ರಿಜಾಲು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಹಲ್ಲೆಗೆ ಒಳಗಾಗಿ ಮೃತಪಟ್ಟ ಸ್ಥಳೀಯ ನಿವಾಸಿಯೇ ಪೀಟರ್. ಈತ ಕಳೆದ ಡಿಸೆಂಬರ್ 25ರಂದು ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದನು. ತಿಂಗಳ ಕಾಲ ಜೈಲಿನಲ್ಲಿದ್ದ ಪೀಟರ್ ವಾರದ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದನು.[ಮಂತ್ರವಾದಿ ಮಾತು ಕೇಳಿ ಹಾವು ಕೊಂದ ವ್ಯಕ್ತಿ ಮೇಲೆ ಹಲ್ಲೆ]

ಘಟನೆ ವಿವರ:
ಜೈಲಿನಿಂದ ಹೊರ ಬಂದಿದ್ದ ಪೀಟರ್ ಎರಡು ದಿನಗಳ ಹಿಂದೆ ತೋಟ ತ್ತಾಡಿಯ ಮನೆಯೊಂದಕ್ಕೆ ನುಗ್ಗಿ ಅಡಿಕೆ ಕಳ್ಳತನ ಮಾಡಿ ಕಾಡಿನಲ್ಲಿ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ತನಿಖೆ ಕೈಗೊಂಡ ಬೆಳ್ತಂಗಡಿ ಪೊಲೀಸರಿಗೆ ಈತನ ಸುಳಿವು ದೊರೆತಿರಲಿಲ್ಲ.[ದರೋಡೆ ಯತ್ನ, ಭೂಗತ ಪಾತಕಿ ವಿಕ್ಕಿಶೆಟ್ಟಿ ಸಹಚರರ ಬಂಧನ]
ಈ ನಡುವೆ ಸೋಮವಾರ ಸಂಜೆ ವೇಳೆ ಈತನಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಕಾಡಿನ ನಡುವೆ ಸ್ಥಳೀಯರಿಗೆ ಸಿಕ್ಕಿ ಬಿದ್ದಿದ್ದಾನೆ. ಪೀಟರ್ ಸಿಕ್ಕಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸುವ ಮೊದಲೇ ಸ್ಥಳಿಯರು ಆತನನ್ನು ಸರಿಯಾಗಿ ಥಳಿಸಿದ್ದಾರೆ.
ಬಳಿಕ ಬೆಳ್ತಂಗಡಿ ಎಸೈ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಜನರನ್ನು ಚದುರಿಸಿ ತೀವ್ರ ಹಲ್ಲೆಗೆ ಒಳಗಾದ ಪೀಟರ್ ನನ್ನು ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ತರುವ ಮೊದಲೇ ಮೃತಪಟ್ಟಿದ್ದು, ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.[ಕರಾವಳಿ ಭಾಗದಲ್ಲಿ ಒಂದು ವರ್ಷದಲ್ಲಿ 217 ಕೊಲೆ]
ಪೀಟರ್ ಮರ ಕಳ್ಳತನ ಸೇರಿದಂತೆ ಸುಮಾರು ಒಂಭತ್ತಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿದ್ದನು. ಇತ್ತೀಚಿನ ದಿನಗಳಲ್ಲಿ ಈತ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದನು. ಡಿಸೆಂಬರ್ ತಿಂಗಳಿನಲ್ಲಿ ನಡೆದ ಕಳ್ಳತನದ ಆರೋಪದಲ್ಲಿ ಬಂಧಿಯಾಗಿ ಸೆರೆವಾಸ ಅನುಭವಿಸಿದ್ದನು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications