ಮಂಗಳೂರು: ಸಮನ್ಸ್ ನೀಡಲು ಬಂದು ಅಪ್ರಾಪ್ತೆಯನ್ನೇ ಅತ್ಯಾಚಾರ ಮಾಡಿದ ಪೊಲೀಸ್ ಕಾನ್ಸ್ಟೆಬಲ್!
ಮಂಗಳೂರು, ಸೆಪ್ಟೆಂಬರ್ 28: ಸಮನ್ಸ್ ನೀಡಲು ಒಂದು ಮನೆಗೆ ತೆರಳುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್, ಆ ಮನೆಯ ಅಪ್ರಾಪ್ತ ಬಾಲಕಿಯನ್ನೇ ಅತ್ಯಾಚಾರ ಮಾಡಿದ ಹೀನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಬೀರಂತಡ್ಕ ಎಂಬಲ್ಲಿ ನಡೆದಿದೆ. ಕಡಬ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಶಿವರಾಜ್ ನಾಯಕ್, ಬಾಲಕಿಯನ್ನು ಅತ್ಯಾಚಾರ ಮಾಡಿದ ಪಾಪಿ ಪೊಲೀಸ್ ಆಗಿದ್ದಾನೆ.
ಕುಂತೂರು ಗ್ರಾಮದ ಬೀರಂತಡ್ಕ ನಿವಾಸಿಯೊಬ್ಬರ 18 ವರ್ಷದ ಹಿರಿಯ ಮಗಳು ಅಪ್ರಾಪ್ತ ಬಾಲಕಿ, ಈ ಹಿಂದಿನ ಪ್ರಕರಣದ ಸಂತ್ರಸ್ತೆಯಾಗಿದ್ದು, ಈ ಪ್ರಕರಣದ ದಾಖಲೆ ಮತ್ತು ಸಮನ್ಸ್ ನೀಡುವ ಸಲುವಾಗಿ ಕಡಬ ಠಾಣೆಯ ಪೊಲೀಸ್ ಕಾನ್ಸ್ಟೆಬಲ್ ಶಿವರಾಜ್ ನಾಯಕ್ ಆ ಮನೆಗೆ ಹೋಗುತ್ತಿದ್ದ.
ಕಳೆದ ಆರು ತಿಂಗಳುಗಳಿಂದ ಶಿವರಾಜ್ ಆ ಮನೆಗೆ ಹೋಗುತ್ತಿದ್ದು, ಈ ವೇಳೆ ಹಿರಿಮಗಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪ್ರಕರಣ ಮುಗಿದರೂ ಶಿವರಾಜ್ ಬೇರೆ ಬೇರೆ ಕಾರಣದ ನೆಪವೊಡ್ಡಿ ಮನೆಗೆ ಬರುತ್ತಿದ್ದು, ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಬಾಲಕಿ ಗರ್ಭವತಿ ಆದ ಸಂದರ್ಭದಲ್ಲಿ ಶಿವರಾಜ್ ನಾಯಕ್ಗೆ ಬಾಲಕಿ ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಈ ವೇಳೆ ಶಿವರಾಜ್, ನಾನು ಮದುವೆಯಾಗೋದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಲು ತಗುಲುವ ವೆಚ್ಚ ಕೊಡುತ್ತೇನೆ ಎಂದು ಕೈ ತೊಳೆದುಕೊಳ್ಳಲು ಯತ್ನಿಸಿದ್ದಾನೆ.
ಈ ವಿಷಯ ಮನೆಯವರಿಗೆ ಗೊತ್ತಾಗಿ, ಮಗಳನ್ನು ಮದುವೆಯಾಗದಿದ್ದರೆ ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಆಂತಾ ಅಘಾತಕ್ಕೊಳಗಾಗಿದ್ದಾರೆ. ಇದಾದ ಬಳಿಕ ಸೆಪ್ಟಂಬರ್ 18ರಂದು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದ ತಾಯಿ- ಮಗಳು ಮತ್ತೆ ಮನೆಗೆ ಬಂದಿಲ್ಲ. ಬಾಲಕಿಯ ತಾಯಿ ತನ್ನ ಗಂಡನಿಗೆ ಕಾಲ್ ಮಾಡಿ, ಶಿವರಾಜ್ 35,000 ರೂಪಾಯಿಯನ್ನು ನಮಗೆ ಆನ್ಲೈನ್ ಮೂಲಕ ಕಳುಹಿಸಿದ್ದು, ನಾವೊಂದು ಕಡೆ ಇದ್ದೇವೆ ಅಂತಾ ಹೇಳಿದ್ದಾರೆ.

ಪಾಪಿ ಪೊಲೀಸ್ ಕಾನ್ಸ್ಟೆಬಲ್ನ ನೀಚ ಕೃತ್ಯಕ್ಕೆ ತನ್ನ ಕುಟುಂಬ ಬೀದಿಗೆ ಬಂದಿರುವುದರಿಂದ ಬಡ ತಂದೆ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಶಿವರಾಜ್ ತನ್ನ ಪ್ರಭಾವವನ್ನು ಬಳಸಿ ತಾಯಿ- ಮಗಳನ್ನು ಅಜ್ಞಾತ ಸ್ಥಳದಲ್ಲಿ ಇರಿಸಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಾಲಕಿ ತಂದೆ ಕೊಟ್ಟ ದೂರಿನ ಅನ್ವರ ಕಡಬ ಠಾಣೆಯಲ್ಲಿ ಪೊಲೀಸರು ಆರೋಪಿ ಶಿವರಾಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2021ರ ಮಾರ್ಚ್ನಿಂದ ಸಪ್ಟೆಂಬರ್ 18ರವರೆಗೆ ಬಾಲಕಿಗೆ ಅತ್ಯಾಚಾರ ಎಸಗಿರುವ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಪಾಪಿ ಪೊಲೀಸ್ ಕಾನ್ಸ್ಟೆಬಲ್ ವಿರುದ್ಧ ಫೋಸ್ಕೋ ಖಾಯಿದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಶಿವರಾಜ್ ನಾಯಕ್ನನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಶಿವರಾಜ್ ನಾಯಕ್ನನ್ನು ಕೂಡಲೇ ಕರ್ತವ್ಯದಿಂದ ಅಮಾನತುಗೊಳಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಆರೋಪಿಯನ್ನು ರಕ್ಷಿಸಲು ಪೊಲೀಸ್ ಇಲಾಖೆ ಪ್ರಯತ್ನಪಟ್ಟರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಂಘಟನೆ ನೀಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications