Get Updates
Get notified of breaking news, exclusive insights, and must-see stories!

ಸಹೃದಯಿ ವ್ಯಕ್ತಿತ್ವದ ಖ್ಯಾತ ಛಾಯಾ ಪತ್ರಕರ್ತ ಕೇಶವ ವಿಟ್ಲ ಇನ್ನಿಲ್ಲ

ಮಂಗಳೂರು ಮೇ 28: ಕರ್ನಾಟಕದ ನೈಸರ್ಗಿಕ ಸಂಪತ್ತನ್ನು ಕ್ಯಾಮೆರಾ ಕಣ್ಣಿನ ಮೂಲಕ ತೋರಿಸಿ ಹೊಸ ಲೋಕವೇ ತೆರೆದಿಟ್ಟಿದ್ದ ಪ್ರಸಿದ್ಧ ಮಾನವಾಸಕ್ತ, ಖ್ಯಾತ ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ ಇನ್ನಿಲ್ಲ.

ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಶವ್ ವಿಟ್ಲ ಇಂದು ಸೋಮವಾರ ಮುಂಜಾನೆ ಮೂರು ಗಂಟೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 56ರ ಹರೆಯದ ವಿಟ್ಲ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದವಾರದ ಕೇಶವ ವಿಟ್ಲ ಅವರು 1984ರಲ್ಲಿ ಮುಂಗಾರು ಪತ್ರಿಕೆಯ ಮೂಲಕ ಪತ್ರಿಕಾ ಛಾಯಗ್ರಾಹಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಕೇಶವ್ ವಿಟ್ಲ ನಂತರ 1996ರಲ್ಲಿ ಬೆಂಗಳೂರಿನಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕಾ ಬಳಗದಲ್ಲಿ ಹಲವು ವರ್ಷಗಳ ಕಾಲ ಛಾಯಗ್ರಾಹಕರಾಗಿ ಸೇವೆ ಸಲ್ಲಿಸಿದರು.

ತದನಂತರ ಫ್ರೀಲಾನ್ಸ್ ಪತ್ರಿಕಾ ಛಾಯಾಗ್ರಾಹಕರಾಗಿ ದಿ ಟೆಲಿಗ್ರಾಫ್ , ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಗಳಿಗೆ ಛಾಯಚಿತ್ರಗಳನ್ನು ಪೂರೈಸಿದ್ದಾರೆ.

A senior photographer of Dakshina kannada district Keshav Vitla passed away

ತಮ್ಮ ಜೀವನದುದ್ದಕ್ಕೂ ಶ್ರಮವಹಿಸಿ ಸಿದ್ದಪಡಿಸಿದ್ದ ಕರ್ನಾಟಕದ ನೈಸರ್ಗಿಕ ಸಂಪತ್ತಿನ ಕಾಫಿ ಟೇಬಲ್ ಪುಸ್ತಕ "ಫೆಸೆಟ್ಸ್ ಆಫ್ ಕರ್ನಾಟಕ " ಛಾಯಚಿತ್ರ ಸಂಪುಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಈ ಪುಸ್ತಕ ರಾಜ್ಯದಾದ್ಯಂತ ಭಾರೀ ಜನಮನ್ನಣೆ ಪಡೆದಿತ್ತು.

In Pics: ಕೇಶವ ವಿಟ್ಲ ಕಂಡಂತೆ ಕರ್ನಾಟಕದ ಜಲಸಿರಿ

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಶ್ರೇಷ್ಟ ಸುದ್ದಿ ಛಾಯಾಗ್ರಾಹಕ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್‌ ನಿಂದ ಜೀವಮಾನ ಸಾಧನೆಗಾಗಿ ಪ್ರಶಸ್ತಿ , ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಬಲಿಯೇಂದ್ರ ಪುರಸ್ಕಾರ , ತುಳುನಾಡ ಸಿರಿ ಪ್ರಶಸ್ತಿ ಗಳು ಕೇಶವ ಅವರನ್ನು ಅರಸಿ ಬಂದವು . ಅವರು ಹಲವು ಏಕವ್ಯಕ್ತಿ ಛಾಯಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+