ಐದು ದಿನಗಳ ಸತತ ಚಿಕಿತ್ಸೆ: ಬೃಹತ್ ಹೆಬ್ಬಾವಿಗೆ ಮರುಜನ್ಮ ನೀಡಿದ ನಾರಾವಿ ವೈದ್ಯರ ತಂಡ
ಮಂಗಳೂರು, ಅಕ್ಟೋಬರ್ 04: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾಣಸಿಕ್ಕಿರುವ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಮಂಗಳೂರಿನ ಯುವ ವೈದ್ಯರ ತಂಡವೊಂದು ಚಿಕಿತ್ಸೆ ನೀಡಿ ರಕ್ಷಿಸಿ ಮರಳಿ ಸುರಕ್ಷಿತವಾಗಿ ಬಿಟ್ಟಿದೆ.
ಉರಗ ರಕ್ಷಕ ಧೀರಜ್ ನಾವೂರು ಅವರಿಗೆ ಬಂಟ್ವಾಳದ ವಗ್ಗದಲ್ಲಿ ಈ ಹೆಬ್ಬಾವು ಅಸ್ವಸ್ಥ ಸ್ಥಿತಿಯಲ್ಲಿ ಕಾಣಸಿಕ್ಕಿದೆ. ಯಾರೋ ಹೊಡೆದಿದ್ದಾರೇನೋ ಅಂದುಕೊಂಡ ಅವರು ತಕ್ಷಣ ಮಂಗಳೂರಿನ ಪಶು ವೈದ್ಯೆ ಡಾ.ಯಶಸ್ವಿ ನಾರಾವಿ ಅವರಿಗೆ ಕರೆ ಮಾಡಿದ್ದಾರೆ. ಚಿಕಿತ್ಸೆ ನೀಡಲೆಂದು ಅವರು ಹೆಬ್ಬಾವನ್ನು ಕ್ಲಿನಿಕ್ಗೆ ಕರೆ ತರವಂತೆ ಸೂಚಿಸಿದ್ದಾರೆ. ಅದರಂತೆ ತಂದ ಹೆಬ್ಬಾವನ್ನು ಪರಿಶೀಲಿಸಿದಾಗ ಯಾರೂ ಹೊಡೆದಿರಲಿಲ್ಲ. ಬದಲಾಗಿ ಅದಕ್ಕೆ ಮಲಬದ್ಧತೆ ಸಮಸ್ಯೆಯಿದೆ ಎಂದು ತಿಳಿದುಬಂದಿದೆ.

ತಕ್ಷಣ ಡಾ.ಯಶಸ್ವಿ ನಾರಾವಿಯೊಂದಿಗೆ, ಡಾ.ಮೇಘನಾ ಪೆಮ್ಮಯ್ಯ, ಡಾ.ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಸೇರಿದಂತೆ ವೈದ್ಯರ ತಂಡ ಈ ಹೆಬ್ಬಾವಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಹತ್ತು ಅಡಿಯಷ್ಟು ಉದ್ದವೂ, 13 ಕೆಜಿ ತೂಕದ ಈ ಹೆಬ್ಬಾವು ಸಾಕಷ್ಟು ಗಟ್ಟಿಯಾದ ಮಲಬದ್ಧತೆಯ ದ್ರವ್ಯರಾಶಿಯನ್ನು ಹೊಂದಿತ್ತು. ಅದರ ದೇಹದ ಅರ್ಧ ಭಾಗದಷ್ಟು ಮಲ ತುಂಬಿಕೊಂಡಿತ್ತು. ಅಲ್ಟ್ರಾಸೌಂಡ್ ಮಾಡುವ ಮೊದಲು ಅರಿವಳಿಕೆ ನೀಡಲಾಯಿತು. ಬಳಿಕ ಮೂರು ಗಂಟೆಗಳ ಕಾಲ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲಾ ಮಲಬದ್ಧತೆ ವಸ್ತುಗಳನ್ನು ತೆಗೆದುಹಾಕಲಾಗಿದೆ.
ಬಳಿಕ, ಐದು ದಿನಗಳವರೆಗೆ ದ್ರವಗಳು, ಆ್ಯಂಟಿಬಯೋಟಿಕ್ ಮತ್ತು ನೋವಿನ ಔಷಧಿಗಳನ್ನು ನೀಡಲಾಯಿತು. ಇದರಿಂದ ಹೆಬ್ಬಾವು ಮತ್ತೆ ಯಥಾಸ್ಥಿತಿಗೆ ಬಂದಿದೆ. ಹೆಬ್ಬಾವುಗಳಲ್ಲಿ ಮಲಬದ್ಧತೆ ಸಾಮಾನ್ಯ. ಆದರೆ ಇಷ್ಟೊಂದು ಸಮಸ್ಯೆಯನ್ನು 10 ವರ್ಷಗಳ ತನ್ನ ಅನುಭವದಲ್ಲಿ ಕಂಡಿಲ್ಲ ಎಂದು ಡಾ.ಯಶಸ್ವಿ ನಾರಾವಿ ಹೇಳಿದ್ದಾರೆ. ಬಳಿಕ ಉರಗ ರಕ್ಷಕ ಧೀರಜ್ ನಾವೂರು ಅವರು ಈ ಹೆಬ್ಬಾವನ್ನು ರಕ್ಷಿಸಿದ ಪ್ರದೇಶದ ಸಮೀಪದಲ್ಲಿಯೇ ಸುರಕ್ಷಿತವಾಗಿ ಬಿಟ್ಟಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications