ಐದು ದಿನಗಳ ಸತತ ಚಿಕಿತ್ಸೆ: ಬೃಹತ್ ಹೆಬ್ಬಾವಿಗೆ ಮರುಜನ್ಮ ನೀಡಿದ ನಾರಾವಿ ವೈದ್ಯರ ತಂಡ
ಮಂಗಳೂರು, ಅಕ್ಟೋಬರ್ 04: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾಣಸಿಕ್ಕಿರುವ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಮಂಗಳೂರಿನ ಯುವ ವೈದ್ಯರ ತಂಡವೊಂದು ಚಿಕಿತ್ಸೆ ನೀಡಿ ರಕ್ಷಿಸಿ ಮರಳಿ ಸುರಕ್ಷಿತವಾಗಿ ಬಿಟ್ಟಿದೆ.
ಉರಗ ರಕ್ಷಕ ಧೀರಜ್ ನಾವೂರು ಅವರಿಗೆ ಬಂಟ್ವಾಳದ ವಗ್ಗದಲ್ಲಿ ಈ ಹೆಬ್ಬಾವು ಅಸ್ವಸ್ಥ ಸ್ಥಿತಿಯಲ್ಲಿ ಕಾಣಸಿಕ್ಕಿದೆ. ಯಾರೋ ಹೊಡೆದಿದ್ದಾರೇನೋ ಅಂದುಕೊಂಡ ಅವರು ತಕ್ಷಣ ಮಂಗಳೂರಿನ ಪಶು ವೈದ್ಯೆ ಡಾ.ಯಶಸ್ವಿ ನಾರಾವಿ ಅವರಿಗೆ ಕರೆ ಮಾಡಿದ್ದಾರೆ. ಚಿಕಿತ್ಸೆ ನೀಡಲೆಂದು ಅವರು ಹೆಬ್ಬಾವನ್ನು ಕ್ಲಿನಿಕ್ಗೆ ಕರೆ ತರವಂತೆ ಸೂಚಿಸಿದ್ದಾರೆ. ಅದರಂತೆ ತಂದ ಹೆಬ್ಬಾವನ್ನು ಪರಿಶೀಲಿಸಿದಾಗ ಯಾರೂ ಹೊಡೆದಿರಲಿಲ್ಲ. ಬದಲಾಗಿ ಅದಕ್ಕೆ ಮಲಬದ್ಧತೆ ಸಮಸ್ಯೆಯಿದೆ ಎಂದು ತಿಳಿದುಬಂದಿದೆ.

ತಕ್ಷಣ ಡಾ.ಯಶಸ್ವಿ ನಾರಾವಿಯೊಂದಿಗೆ, ಡಾ.ಮೇಘನಾ ಪೆಮ್ಮಯ್ಯ, ಡಾ.ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಸೇರಿದಂತೆ ವೈದ್ಯರ ತಂಡ ಈ ಹೆಬ್ಬಾವಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಹತ್ತು ಅಡಿಯಷ್ಟು ಉದ್ದವೂ, 13 ಕೆಜಿ ತೂಕದ ಈ ಹೆಬ್ಬಾವು ಸಾಕಷ್ಟು ಗಟ್ಟಿಯಾದ ಮಲಬದ್ಧತೆಯ ದ್ರವ್ಯರಾಶಿಯನ್ನು ಹೊಂದಿತ್ತು. ಅದರ ದೇಹದ ಅರ್ಧ ಭಾಗದಷ್ಟು ಮಲ ತುಂಬಿಕೊಂಡಿತ್ತು. ಅಲ್ಟ್ರಾಸೌಂಡ್ ಮಾಡುವ ಮೊದಲು ಅರಿವಳಿಕೆ ನೀಡಲಾಯಿತು. ಬಳಿಕ ಮೂರು ಗಂಟೆಗಳ ಕಾಲ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲಾ ಮಲಬದ್ಧತೆ ವಸ್ತುಗಳನ್ನು ತೆಗೆದುಹಾಕಲಾಗಿದೆ.
ಬಳಿಕ, ಐದು ದಿನಗಳವರೆಗೆ ದ್ರವಗಳು, ಆ್ಯಂಟಿಬಯೋಟಿಕ್ ಮತ್ತು ನೋವಿನ ಔಷಧಿಗಳನ್ನು ನೀಡಲಾಯಿತು. ಇದರಿಂದ ಹೆಬ್ಬಾವು ಮತ್ತೆ ಯಥಾಸ್ಥಿತಿಗೆ ಬಂದಿದೆ. ಹೆಬ್ಬಾವುಗಳಲ್ಲಿ ಮಲಬದ್ಧತೆ ಸಾಮಾನ್ಯ. ಆದರೆ ಇಷ್ಟೊಂದು ಸಮಸ್ಯೆಯನ್ನು 10 ವರ್ಷಗಳ ತನ್ನ ಅನುಭವದಲ್ಲಿ ಕಂಡಿಲ್ಲ ಎಂದು ಡಾ.ಯಶಸ್ವಿ ನಾರಾವಿ ಹೇಳಿದ್ದಾರೆ. ಬಳಿಕ ಉರಗ ರಕ್ಷಕ ಧೀರಜ್ ನಾವೂರು ಅವರು ಈ ಹೆಬ್ಬಾವನ್ನು ರಕ್ಷಿಸಿದ ಪ್ರದೇಶದ ಸಮೀಪದಲ್ಲಿಯೇ ಸುರಕ್ಷಿತವಾಗಿ ಬಿಟ್ಟಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications