ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನ ಪತ್ತೆ
ಮಂಗಳೂರು, ಸೆಪ್ಟೆಂಬರ್ 18: ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನವೊಂದು ಪತ್ತೆಯಾಗಿದೆ. ಶ್ರೀ ಕ್ಷೇತ್ರ ಪೊಳಲಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ.
ಬಂಟ್ವಾಳದ ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ತ್ವರಿತಗತಿಯಿಂದ ಸಾಗುತ್ತಿದ್ದು ಈ ಸಂದರ್ಭದಲ್ಲಿ ನಡೆಯುತ್ತಿದ್ದ ಕಾಮಗಾರಿ ವೇಳೆ ಈ ಅಪೂರ್ವ ಶಿಲಾಶಾಸನ ಪತ್ತೆಯಾಗಿದೆ. ಈ ಶಾಸನ ಅಳುಪ ವಂಶದ ಅರಸ ಕುಲಶೇಖರನ ಆಳ್ವಿಕೆಯ ಕಾಲದ್ದು ಎಂದು ಹೇಳಲಾಗಿದೆ.

ಈ ಶಾಸನ ಸುಮಾರು 28 ಇಂಚು ಎತ್ತರ ಹಾಗೂ ಮೇಲ್ಭಾಗದಲ್ಲಿ ಸುಮಾರು 24 ಇಂಚು ಅಗಲವಿದ್ದು, ನೋಡಲು ಸುಂದರವಾಗಿದೆ. ಈ ಶಿಲಾ ಫಲಕದಲ್ಲಿ ಅಕ್ಷರಗಳನ್ನು ಇಪ್ಪತ್ತು ಸಾಲುಗಳಲ್ಲಿ ಅತ್ಯಂತ ಸ್ಫುಟವಾಗಿ ಕೆತ್ತಲಾಗಿದೆ. ಶಾಸನ ಫಲಕದ ತಳಭಾಗದಲ್ಲಿ ಎರಡು ಸಿಂಹಗಳ ಮಧ್ಯೆ ಒಬ್ಬ ವ್ಯಕ್ತಿಯು ರಾಜ ಭಂಗಿಯಲ್ಲಿ ಸ್ತ್ರೀಯೊಂದಿಗೆ ಆಸೀನರಾಗಿರುವ ಚಿತ್ರವಿದೆ.
ಈ ಶಾಸನವನ್ನು ಪರಿಶೀಲಿಸಿ ಅಧ್ಯಯನ ಮಾಡಿದ ಇತಿಹಾಸ ಸಂಶೋಧಕ ಡಾ. ಗಣಪಯ್ಯ ಭಟ್ ಇದರ ಕುರಿತು ವಿವರಣೆ ನೀಡಿದ್ದಾರೆ. "ಅಳುಪ ವಂಶದ ಅರಸನಾದ ಕುಲಶೇಖರ ವೀರ ಸಾಹಸ ಮೆರೆದ ವಿಚಾರವನ್ನು ಈ ಶಾಸನದಲ್ಲಿ ವಿವರಿಸುತ್ತದೆ" ಎಂದಿದ್ದಾರೆ.

ಪ್ರಸ್ತುತ ಪೊಳಲಿಯಲ್ಲಿ ಬೆಳಕಿಗೆ ಬಂದಿರುವ ಕುಲಶೇಖರ ಪಾಂಡ್ಯ ಪಟ್ಟಿ ದೇವನ ಈ ಶಾಸನವು ಅಳುಪ ಯುಗದ ತುಳುನಾಡಿನ ಇತಿಹಾಸದ ಒಂದು ಮಹತ್ವಪೂರ್ಣ ದಾಖಲೆ ಎಂದು ಪರಿಗಣಿಸಲಾಗಿದೆ. ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಶಾಸನ ಮಾತ್ರವಲ್ಲದೆ ಮೂರು ವೀರಗಲ್ಲು ಕೂಡಾ ತುಂಡಾದ ಸ್ಥಿತಿಯಲ್ಲಿ ಪತ್ತೆಯಾಗಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications