ಮುದ್ದಿನ ನಾಯಿ ರಕ್ಷಿಸಲು ಮಡಿಕೇರಿಯಿಂದ ನಡೆದುಕೊಂಡು ಬಂದ ಯುವಕ
Recommended Video

ಮಂಗಳೂರು, ಆಗಸ್ಟ್ 20: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ, ಮೊಣ್ಣಂಗೇರಿ, ಮಾದೆನಾಡು ಸುತ್ತಮುತ್ತ ಸಂಭವಿಸಿದ ಜಲಪ್ರಳಯ ಹಾಗು ಭಾರೀ ಭೂಕುಸಿತದಲ್ಲಿ ಸಂಭವಿಸಿದ ದುರಂತ ದೃಶ್ಯಗಳು ಒಂದೊಂದಾಗಿ ಹೊರ ಜಗತ್ತಿಗೆ ಗೋಚರಿಸುತ್ತಿವೆ.
ಜೋಳುಪಾಳ , ಮೊಣ್ಣಂಗೇರಿ, ಮಾದೆನಾಡು ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮನೆಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಪಾಯದಲ್ಲಿದ್ದವರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.
ಜೋಡುಪಾಳದ ದುರಂತ ಮಾನವನ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ. ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕೀ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ.

ಆ ಯುವಕನ ಹೆಸರು ಜೋಡುಪಾಳದ ನಿತಿನ್ ಭರತ್ . ಆಗಸ್ಟ್ 17 ರಂದು ಸಂಭವಿಸಿದ ಅತಿವೃಷ್ಟಿ ಹಾಗು ಭಾರೀ ಭೂಕುಸಿತದಿಂದ ನಿತಿನ್ ಭರತ್ ಅವರ ಮನೆ ಅಪಾಯಕ್ಕೆ ಸಿಲುಕಿತ್ತು. ಆದರೆ ನಿತಿನ್ ಕುಟುಂಬ ಆ ಸಂದರ್ಭದಲ್ಲಿ ಜೋಡುಪಾಳದಲ್ಲಿರಲ್ಲಿಲ್ಲ.
ಆದರೆ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗೆ ನಿತಿನ್ ಭರತ್ ಅವರ ಮುದ್ದಿನ ನಾಯಿ ಸ್ಯಾಂಡಿ ಸಿಲುಕಿಕೊಂಡಿತ್ತು.
ತನ್ನ ಮುದ್ದಿನ ನಾಯಿ ಸ್ಯಾಂಡಿಯ ರಕ್ಷಣೆಗೆ ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದರು ನಿತಿನ್ ಭರತ್. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣವೇ ಖುಷಿಯಾಗಿದೆ.

ತನ್ನ ರಕ್ಷಣೆಗೆ ಬಂದ ನಿತಿನ್ ಅವರನ್ನು ಕಂಡ ಕೂಡಲೇ ಸ್ಯಾಂಡಿಯ ಹರ್ಷದ ತೋರ್ಪಡಿಕೆ ಅಕ್ಷರಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅದನ್ನು ನೋಡಿಯೇ ಆನಂದಿಸಬೇಕು. ಈಗ ಸ್ಯಾಂಡಿ ತನ್ನ ಪ್ರೀತಿಯ ಒಡೆಯ ನಿತಿನ್ ಭರತ್ ಜೊತೆ ಸುರಕ್ಷಿತವಾಗಿ ಮರಳಿ ಮಡಿಕೇರಿಗೆ ತೆರಳಿದೆ.
ಅಂದಹಾಗೆ ನಿತಿನ್ ಭರತ್ ಬೆಂಗಳೂರಿನ ಆಕ್ಸ್ ಫರ್ಡ್ ಕಾಲೇಜಿನಲ್ಲಿ ಮೊದಲನೇ ವರ್ಷದ ಎಂಟೆಕ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ ನಿತಿನ್ ಕಾರ್ಯ ಎಲ್ಲರ ಪ್ರಶಂಸೆಗೆ ಒಳಗಾಗಿದ್ದು, ತನಗೆ ಅಪಾಯವಿದೆ ಎಂದು ತಿಳಿದಿದ್ದರೂ ಪ್ರವಾಹದ ನಡುವೆಯೇ ನಾಯಿಯನ್ನು ರಕ್ಷಿಸಿರುವುದನ್ನು ಕಂಡು ಸ್ಥಳೀಯರಿಂದ ಹಿಡಿದು ಪ್ರತಿಯೊಬ್ಬರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನೊಂದು ಹೇಳಲೇಬೇಕಾದ ಸಂಗತಿ ಎಂದರೆ ನಿತಿನ್ ತಮ್ಮ ಮುದ್ದು ನಾಯಿಯನ್ನಷ್ಟೇ ಅಲ್ಲದೇ 15 ಜನ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಹೌದು, ನಾಯಿಯನ್ನು ರಕ್ಷಿಸಿದ ನಂತರ ಆರ್ಮಿಯವರ ಬಳಿ ಬಂದು ಕಾರ್ಮಿಕರು ಸಂಕಷ್ಟದಲ್ಲಿರುವವನ್ನು ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಅವರು ಕಾರ್ಮಿಕರನ್ನು ಕಷ್ಟದಿಂದ ಪಾರು ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications