ಆಧಾರ್ ತಿದ್ದುಪಡಿಗೆ ಅಂಚೆ ಕಚೇರಿಗಳಲ್ಲಿ ವ್ಯವಸ್ಥೆ: ಮಂಗಳೂರು DC
ಮಂಗಳೂರು, ಸೆಪ್ಟೆಂಬರ್ 01 : ಆಧಾರ್ ಕಾರ್ಡ್ ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ ತಿಳಿಸಿದ್ದಾರೆ.
ಪ್ರಸ್ತುತ ಸರಕಾರದ ವಿವಿಧ ಯೋಜನೆಗಳಿಗೆ ಆಧಾರ್ ಲಿಂಕಿಂಗ್ ಸಂದರ್ಭ ಆಧಾರ್ ಕಾರ್ಡ್ ನಲ್ಲಿ ಮಾಹಿತಿ ತಾಳೆ ಹೊಂದಿರುವುದರಿಂದ ಆಧಾರ್ ತಿದ್ದುಪಡಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ನಲ್ಲಿನ ತಪ್ಪುಗಳನ್ನು ಸರಿಪಡಿಸಲು ಜಿಲ್ಲೆಯ 23 ಅಂಚೆ ಕಚೇರಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಪೈಕಿ ಈಗಾಗಲೇ ಮಂಗಳೂರು ವಿಭಾಗದ 15 ಅಂಚೆ ಕಚೇರಿಗಳಲ್ಲಿ ಕಾರ್ಯಾರಂಭವಾಗಿದೆ. ಅಗತ್ಯ ಪರಿಕರಗಳು ಹಾಗು ತಾಂತ್ರಿಕ ವ್ಯವಸ್ಥೆ ಒದಗಿದ ನಂತರ ಉಳಿದ ಅಂಚೆ ಕಚೇರಿಗಳಲ್ಲೂ ಆಧಾರ್ ತಿದ್ದುಪಡಿ ಪ್ರಾರಂಭವಾಗಲಿದೆ ಎಂದು ಜಗದೀಶ ಹೇಳಿದರು.
ಆಧಾರ್ ತಿದ್ದುಪಡಿ ಸಂದರ್ಭ ತ್ವರಿತವಾಗಿ ಪ್ರಕ್ರಿಯೆ ಪೂರೈಸಲು ಆಧಾರ್ ಕೇಂದ್ರಗಳಿಗೆ ಹಾಗು ತಿದ್ದುಪಡಿ ಮಾಡುವ ಅಂಚೆ ಕೇಂದ್ರಗಳಿಗೆ ಹೈಸ್ಪೀಡ್ ಇಂಟರ್ ನೆಟ್ ಸೌಲಭ್ಯವನ್ನು ಒದಗಿಸಲು ಬಿಎಸ್ಏನ್ಎಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇದಕ್ಕೆ ಬಿಎಸ್ ಎನ್ಎಲ್ ಒಪ್ಪಿಕೊಂಡಿದೆ. ನೂತನ ಆಧಾರ್ ಕಾರ್ಡ್ ಹಾಗು ತಿದ್ದುಪಡಿಗೆ ಜಿಲ್ಲಾಡಳಿತ ಅಗತ್ಯ ವ್ಯವಸ್ಥೆ ಕಲ್ಪಿಸುತ್ತಿದ್ದು, ಸಾರ್ವಜನಿಕರು ನಿಗದಿತ ಅಂಚೆ ಕಚೇರಿಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿಗಳನ್ನು ಸರಿಪಡಿಸಬಹುದು ಎಂದು ಡಾ.ಕೆ.ಜಿ.ಜಗದೀಶ್ ತಿಳಿಸಿದರು.
ಆಧಾರ್ ತಿದ್ದುಪಡಿ ಅಂಚೆ ಕಚೇರಿಗಳ ವಿವರ: ಮಂಗಳೂರು ಪ್ರಧಾನ ಅಂಚೆ ಕಚೇರಿ ಪಾಂಡೇಶ್ವರ, ಹಂಪನಕಟ್ಟೆ, ಬಲ್ಮಠ, ಕಂಕನಾಡಿ, ಕೊಡಿಯಾಲ್ ಬೈಲ್, ಬಿಜೈ, ಕೊಂಚಾಡಿ, ಕುಲ ಶೇಖರ, ಅಶೋಕ್ ನಗರ, ಪಣಂಬೂರು, ಸುರತ್ಕಲ್, ಕಾಟಿಪಳ್ಳದಲ್ಲಿ ಆಧಾರ್ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications