Get Updates
Get notified of breaking news, exclusive insights, and must-see stories!

ಅಬ್ದುಲ್ ಬಷೀರ್ ಹತ್ಯೆಗೆ ಜೈಲಲ್ಲಿ ಸಂಚು: ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು, ಜನವರಿ 25: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಜನವರಿ 3 ರ ರಾತ್ರಿ ನಡೆದ ಅಬ್ದುಲ್ ಬಷೀರ್ ಅವರ ಹತ್ಯೆಗೆ ಮಂಗಳೂರು ಜೈಲಿನಲ್ಲಿಯೇ ಸಂಚು ರೂಪಿಸಲಾಗಿತ್ತು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅಬ್ದುಲ್ ಬಷೀರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ತನಿಖೆಗೆ ಒಳಪಡಿಸಿದಾಗ ಈ ಹತ್ಯಾ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಅವರು ಹೇಳಿದರು.

ಈ ಹತ್ಯೆ ಪ್ರಕರಣದ ಸಂಚನ್ನು ಮಂಗಳೂರು ಜೈಲಿನಲ್ಲಿ ಹೆಣೆಯಲಾಗಿತ್ತು ಎಂದು ಹೇಳಿದ ಅವರು , "ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಂಟ್ವಾಳದ ಮಿಥುನ್ ಪೂಜಾರಿ, ಮಂಗಳೂರು ಕಾವೂರಿನ ತಿಲಕ್ ರಾಜ್, ಬಂಟ್ವಾಳ ಫರಂಗಿಪೇಟೆಯ ರಾಜು ಹಾಗು ಮಂಗಳೂರು ಕೋಡಿಕಲ್ ನಿವಾಸಿ ಅನೂಪ್ ಕುಲಾಲ್ ಈ ಹತ್ಯಾ ಪ್ರಕರಣದಲ್ಲಿ ಇದ್ದಾರೆ," ಎಂದು ಅವರು ವಿವರ ನೀಡಿದರು.

Abdhul Basheer murder conspiracy hatched in jail: Mangaluru police commissioner

ಈ ನಾಲ್ವರ ಪೈಕಿ 3 ಮಂದಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿದ್ದಾರೆ. ಮತ್ತೊಬ್ಬ ಆರೋಪಿ ಅನುಪ್ ಕುಲಾಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+