ಕೊಡಗು ಮಾದರಿ ವಿಶೇಷ ಪ್ಯಾಕೇಜನ್ನು ಬೆಳ್ತಂಗಡಿಗೆ ಘೋಷಿಸಲಿ- ಅಭಯಚಂದ್ರ ಜೈನ್
ಮಂಗಳೂರು ಆಗಸ್ಟ್ 14: "ಮಳೆಯಿಂದಾಗಿ ಬೆಳ್ತಂಗಡಿಯಲ್ಲಿ ಹೆಚ್ಚು ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮಾದರಿಯಲ್ಲಿ ಬೆಳ್ತಂಗಡಿ ತಾಲೂಕಿಗೆ ವಿಶೇಷ ಪ್ಯಾಕೇಜನ್ನು ರಾಜ್ಯ ಸರಕಾರ ಘೋಷಿಸಬೇಕು" ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಕಳೆದ ಬಾರಿ ಮಡಿಕೇರಿಯಲ್ಲಿ ಸಂಭವಿಸಿದ ಮಳೆಹಾನಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ಬೆಳ್ತಂಗಡಿ ತಾಲ್ಲೂಕೊಂದರಲ್ಲೇ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿದುಬಂದ ಅಪಾರ ಪ್ರಮಾಣದ ಮಳೆ ನೀರು ನದಿಗಳಿಗೆ ಸೇರಿ ಸೇತುವೆ, ಕಿಂಡಿ ಅಣೆಕಟ್ಟುಗಳು ಕೊಚ್ಚಿ ಹೋಗಿವೆ. ಪಶ್ಚಿಮ ಘಟ್ಟದ ತಪ್ಪಲಿನ ಜನ ಕೃಷಿಯನ್ನೇ ಅವಲಂಬಿಸಿರುವವರು. ಸುಮಾರು 500 ಮನೆಗಳಿಗೆ ಹಾನಿಯಾಗಿದ್ದು, 300 ಮನೆಗಳು ಪೂರ್ತಿಯಾಗಿ ಹಾನಿಯಾಗಿವೆ. ಮೂರು ಸೇತುವೆಗಳು ನಾಶವಾಗಿವೆ. ಇದರ ಜತೆ ಕಿರು ಸೇತುವೆಗಳು, ಕಿಂಡಿ ಅಣೆಕಟ್ಟುಗಳು ಕೂಡಾ ಕೊಚ್ಚಿ ಹೋಗಿವೆ. 100 ಎಕರೆ ಬೆಳೆ ನಾಶವಾಗಿದೆ. ಆದ್ದರಿಂದ ರಾಜ್ಯ ಸರಕಾರ ಕೊಡಗು ವಿಶೇಷ ಪ್ಯಾಕೇಜ್ ಮಾದರಿಯಲ್ಲಿ ಬೆಳ್ತಂಗಡಿ ತಾಲೂಕಿಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು" ಎಂದು ಒತ್ತಾಯಿಸಿದರು.

"ಎಲ್ಲವನ್ನು ಕಳೆದುಕೊಂಡಿರುವ ಇಲ್ಲಿಯ ಜನರಿಗೆ ಮತ್ತೆ ಬದುಕು ಕಟ್ಟಿಕೊಳ್ಳಲು ವರ್ಷಗಳೇ ಬೇಕಾದೀತು. ಹಾಗಾಗಿ ಅವರಿಗೆ ಸಮರ್ಪಕವಾಗಿ ಸ್ಪಂದಿಸುವ ಕೆಲಸ ಸರ್ಕಾರದಿಂದ ಆಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಮಂತ್ರಿ ಮಂಡಲ ರಚನೆ ಆಗದಿದ್ದರೂ ರಾಜ್ಯದಾದ್ಯಂತ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಇದನ್ನು ಸ್ವಾಗತಿಸುತ್ತೇವೆ" ಎಂದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications