ಸಿಎಂ ಸಮ್ಮುಖದಲ್ಲೇ ಅಭಯಚಂದ್ರ ಜೈನ್ - ಐವನ್ ಡಿಸೋಜಾ ಜಟಾಪಟಿ
ಮಂಗಳೂರು, ಅಕ್ಟೋಬರ್ 22: ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲೇ ಶಾಸಕರಿಬ್ಬರು ಜಟಾಪಟಿಗೆ ತಳ್ಳಾಡಿ ಸುದ್ದಿಯಾಗಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂಗೆ ಸ್ವಾಗತ ಕೋರಲು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಬಂದಿದ್ದರು. ಆದರೆ ಮುಖ್ಯಮಂತ್ರಿಗಳ ಸಮೀಪ ಬರದಂತೆ ಐವನ್ ಡಿಸೋಜಾರನ್ನು ಅಭಯಚಂದ್ರ ಜೈನ್ ಕೈಯಲ್ಲಿ ದೂಡಿ ತಡೆದಿದ್ದಾರೆ. ಈ ಎಲ್ಲಾ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು ವಿವಾದಕ್ಕೆ ಕಾರಣವಾಗಿದೆ.

ವಿಮಾನ ನಿಲ್ದಾಣದಲ್ಲಿ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಮಂಗಳೂರು ಮೇಯರ್ ಕವಿತಾ ಸನಿಲ್ ಸೇರಿದಂತೆ ಗಣ್ಯರು ಸ್ವಾಗತಿಸಿದರು. ನಂತರ ಬಂಟ್ವಾಳಕ್ಕೆ ತೆರಳಿದರು.

ಮುರಿದು ಬಿದ್ದ ಮಿನಿ ವಿಧಾನಸೌಧದ ಬಾಗಿಲು
ಬಂಟ್ವಾಳದಲ್ಲಿ 252 ಕೋಟಿ ರೂ. ವೆಚ್ಚ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಹೊಸ ಮಿನಿ ವಿಧಾನಸೌಧದವನ್ನು ಮುಖ್ಯಮಂತ್ರಿಗಳು ಬಂಟ್ವಾಳದಲ್ಲಿ ಉದ್ಘಾಟನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟದಿಂದ ಹೊಸ ಕಟ್ಟಡದ ಬಾಗಿಲು ಮುರಿದು ಬಿತ್ತು. ಎಸ್ಪಿ ಸುಧೀರ್ ಕುಮಾರ್ ರೆಡ್ಡಿಯವರನ್ನೂ ಕಾರ್ಯಕರ್ತರು ತಳ್ಳಾಡಿದ್ದರಿಂದ ಪೊಲೀಸರು ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದರು.
ಸಂಜೆ ಮುಖ್ಯಮಂತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಟಿಪ್ಪು ಜಯಂತಿ ಮಾಡಿಯೇ ಮಾಡ್ತೀವಿ
ಟಿಪ್ಪು ಜಯಂತಿ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, "ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ. ಟಿಪ್ಪು ಜಯಂತಿ ರಾಜ್ಯ ಸರಕಾರದ ಕಾರ್ಯಕ್ರಮ. ಬಿಜೆಪಿಯವರು ಸುಮ್ಮನೆ ರಾಜಕಾರಣ ಮಾಡುತ್ತಿದ್ದಾರೆ," ಎಂದು ವಾಗ್ದಾಳಿ ನಡೆಸಿದರು.
ಇನ್ನು, "ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ಅನಂತ್ ಕುಮಾರ್ ಹೆಗಡೆ ಹೆಸರು ಹಾಕಿಯೇ ಹಾಕುತ್ತೇವೆ. ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟದ್ದು," ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಲ್ಲಿದ್ದಲು ಹಗರಣದ ಆರೋಪ ಸುಳ್ಳು
ಸಚಿವ ಡಿ.ಕೆ ಶಿವಕುಮಾರ್ ಮೇಲಿನ ಕಲ್ಲಿದ್ದಲು ಹಗರಣ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಆರೋಪ ದುರುದ್ದೇಶ ಪೂರಿತವಾಗಿದೆ. ಬಿಜೆಪಿಯವರು ಆಧಾರ ರಹಿತ ಆರೋಪ ಮಾಡಿದ್ದಾರೆ. ಆರೋಪದ ಬಗ್ಗೆ ಡಿ.ಕೆ.ಶಿವಕುಮಾರ್ ಈಗಾಗಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಇವೆಲ್ಲಾ ಚುನಾವಣೆ ದೃಷ್ಟಿಯಿಂದ ಮಾಡಿದ ಆರೋಪಗಳು," ಎಂದು ಹೇಳಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications