Get Updates
Get notified of breaking news, exclusive insights, and must-see stories!

ಮಂಗಳೂರು ಸಿಟಿ ಬಸ್ ಗಳ ಮೇಲೆ ಧೀರ ಯೋಧ ಅಭಿನಂದನ್ ಭಾವಚಿತ್ರ

ಮಂಗಳೂರು, ಮಾರ್ಚ್ 12:ದಶಕಗಳ ಹಿಂದಿನ ಮಿಗ್ 21 ನಿಂದ 4ನೇ ತಲೆಮಾರಿನ ಪಾಕಿಸ್ತಾನದ ಅತ್ಯಾಧುನಿಕ ಎಫ್ 16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ದೇಶದ ಹೀರೋ ಆಗಿದ್ದಾರೆ.

ಎಫ್ 16 ವಿಮಾನವನ್ನು ಹೊಡೆದುರುಳಿಸಿ, ನಂತರ ಪಾಕ್ ಸೈನ್ಯದ ಬಂಧನದಲ್ಲಿದ್ದ ವಿಂಗ್‌ ಕಮಾಂಡರ್‌ ಅಭಿನಂದನ್ ಅವರು ಮರಳಿ ಭಾರತಕ್ಕೆ ಬಂದಾಗಿದೆ. ಪಾಕ್ ನೆಲದಲ್ಲೇ ಪಾಕಿಸ್ತಾನಿ ಯೋಧರ ಪ್ರಶ್ನೆಗಳಿಗೆ ದಿಟ್ಟ ಉತ್ತರ ನೀಡಿದ್ದ ಅಭಿನಂದನ್ ವರ್ಧಮಾನ್ ಅವರ ಬಗ್ಗೆ ಪಠ್ಯ ಕೂಡ ಸಿದ್ಧವಾಗುತ್ತಿದೆ.

ಈ ವೀರ ಯೋಧ ಭಾರತದ ಯುವಜನಾಂಗದ ಹೀರೋ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಸ್ಟೇಟಸ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಅಭಿನಂದನ್ ಅವರ ಭಾವಚಿತ್ರಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಅವರ ಸ್ಟೈಲ್ ಆಗಿ ಮೀಸೆ ಮತ್ತು ಹೇರ್‌ಸ್ಟೈಲ್ ಈಗ ಟ್ರೆಂಡ್ ಆಗಿ ಮೂಡಿಬಂದಿವೆ.

Abhinandan Varthamans picture painted on city bus in Mangaluru

ಈಗ ಅಭಿನಂದನ್ ವರ್ಧಮಾನ್ ಅವರ ಮೇಲಿನ ಅಭಿಮಾನ ಮಂಗಳೂರಿನ ಸಿಟಿ ಬಸ್ ಗಳಲ್ಲಿಯೂ ವ್ಯಕ್ತವಾಗುತ್ತಿದೆ. ಹೌದು, ಮಂಗಳೂರಿನ ಸಿಟಿ ಬಸ್ ಒಂದರ ಮೇಲೆ ಅಭಿನಂದನ್ ಅವರ ಭಾವ ಚಿತ್ರ ಅನಾವರಣಗೊಂಡಿದೆ.

ಮಂಗಳಾದೇವಿ-ಕಾವೂರು ನಡುವೆ ಸಂಚರಿಸುವ 14 ಡಿ ನಂಬರಿನ ಬಸ್ ಮೇಲೆ ಅಭಿನಂದನ್ ಅವರ ಚಿತ್ರ ಬಿಡಿಸಲಾಗಿದ್ದು, ಸೆಲ್ಯೂಟ್ ಇಂಡಿಯನ್ ಆರ್ಮಿ ಎಂದು ಬರೆಯಲಾಗಿದೆ.

Abhinandan Varthamans picture painted on city bus in Mangaluru

ಈ ಬಸ್ ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ ನ ಸಿಬ್ಬಂದಿ, ದೇಶ ಕಾಯುವ ಈ ಯೋಧರಿಗೆ ನಮ್ಮದೊಂದು ಸಲಾಮ್. ಅದರಲ್ಲೂ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ದೇಶದ ನಿಜವಾದ ಹೀರೋ. ಅವರ ಬಗ್ಗೆ ಅಪಾರ ಅಭಿಮಾನ ಇದೆ. ಆದ್ದರಿಂದ ಅವರ ಸ್ಟೈಲಿಶ್ ಮೀಸೆ ಇರುವ ಚಿತ್ರವನ್ನು ಬಸ್ ಮೇಲೆ ಬಿಡಿಸಲಾಗಿದೆ ಎಂದು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+