ಮಂಗಳೂರು ಸಿಟಿ ಬಸ್ ಗಳ ಮೇಲೆ ಧೀರ ಯೋಧ ಅಭಿನಂದನ್ ಭಾವಚಿತ್ರ
ಮಂಗಳೂರು, ಮಾರ್ಚ್ 12:ದಶಕಗಳ ಹಿಂದಿನ ಮಿಗ್ 21 ನಿಂದ 4ನೇ ತಲೆಮಾರಿನ ಪಾಕಿಸ್ತಾನದ ಅತ್ಯಾಧುನಿಕ ಎಫ್ 16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ದೇಶದ ಹೀರೋ ಆಗಿದ್ದಾರೆ.
ಎಫ್ 16 ವಿಮಾನವನ್ನು ಹೊಡೆದುರುಳಿಸಿ, ನಂತರ ಪಾಕ್ ಸೈನ್ಯದ ಬಂಧನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರು ಮರಳಿ ಭಾರತಕ್ಕೆ ಬಂದಾಗಿದೆ. ಪಾಕ್ ನೆಲದಲ್ಲೇ ಪಾಕಿಸ್ತಾನಿ ಯೋಧರ ಪ್ರಶ್ನೆಗಳಿಗೆ ದಿಟ್ಟ ಉತ್ತರ ನೀಡಿದ್ದ ಅಭಿನಂದನ್ ವರ್ಧಮಾನ್ ಅವರ ಬಗ್ಗೆ ಪಠ್ಯ ಕೂಡ ಸಿದ್ಧವಾಗುತ್ತಿದೆ.
ಈ ವೀರ ಯೋಧ ಭಾರತದ ಯುವಜನಾಂಗದ ಹೀರೋ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಸ್ಟೇಟಸ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಅಭಿನಂದನ್ ಅವರ ಭಾವಚಿತ್ರಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಅವರ ಸ್ಟೈಲ್ ಆಗಿ ಮೀಸೆ ಮತ್ತು ಹೇರ್ಸ್ಟೈಲ್ ಈಗ ಟ್ರೆಂಡ್ ಆಗಿ ಮೂಡಿಬಂದಿವೆ.

ಈಗ ಅಭಿನಂದನ್ ವರ್ಧಮಾನ್ ಅವರ ಮೇಲಿನ ಅಭಿಮಾನ ಮಂಗಳೂರಿನ ಸಿಟಿ ಬಸ್ ಗಳಲ್ಲಿಯೂ ವ್ಯಕ್ತವಾಗುತ್ತಿದೆ. ಹೌದು, ಮಂಗಳೂರಿನ ಸಿಟಿ ಬಸ್ ಒಂದರ ಮೇಲೆ ಅಭಿನಂದನ್ ಅವರ ಭಾವ ಚಿತ್ರ ಅನಾವರಣಗೊಂಡಿದೆ.
ಮಂಗಳಾದೇವಿ-ಕಾವೂರು ನಡುವೆ ಸಂಚರಿಸುವ 14 ಡಿ ನಂಬರಿನ ಬಸ್ ಮೇಲೆ ಅಭಿನಂದನ್ ಅವರ ಚಿತ್ರ ಬಿಡಿಸಲಾಗಿದ್ದು, ಸೆಲ್ಯೂಟ್ ಇಂಡಿಯನ್ ಆರ್ಮಿ ಎಂದು ಬರೆಯಲಾಗಿದೆ.

ಈ ಬಸ್ ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ ನ ಸಿಬ್ಬಂದಿ, ದೇಶ ಕಾಯುವ ಈ ಯೋಧರಿಗೆ ನಮ್ಮದೊಂದು ಸಲಾಮ್. ಅದರಲ್ಲೂ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ದೇಶದ ನಿಜವಾದ ಹೀರೋ. ಅವರ ಬಗ್ಗೆ ಅಪಾರ ಅಭಿಮಾನ ಇದೆ. ಆದ್ದರಿಂದ ಅವರ ಸ್ಟೈಲಿಶ್ ಮೀಸೆ ಇರುವ ಚಿತ್ರವನ್ನು ಬಸ್ ಮೇಲೆ ಬಿಡಿಸಲಾಗಿದೆ ಎಂದು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications