ಬೆಳ್ಳಂಬೆಳ್ಳಿಗೆ ಮಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳ ದಾಳಿ
ಮಂಗಳೂರು, ಜೂನ್ 12: ಬುಧವಾರ ಬೆಳ್ಳಂಬೆಳಿಗ್ಗೆ ಮಂಗಳೂರಿನ ಸರ್ಕಾರಿ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಕಂದಾಯ ನಿರೀಕ್ಷಕ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಇ ಮಹಾದೇವಪ್ಪ ಅವರ ಮಂಗಳೂರಿನಲ್ಲಿರುವ ಮನೆ, ಬೆಂಗಳೂರಿನ ಸಿದ್ಧೇನಹಳ್ಳಿಯಲ್ಲಿರುವ ಮನೆ, ಚಿತ್ರದುರ್ಗದ ಕಣಿವೆಹಳ್ಳಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮನೆ ಹಾಗು ಕಚೇರಿಯಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಸ್ತಿ ಸೇರಿದಂತೆ ಇತರ ಸೊತ್ತುಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ, ಖಚಿತ ಮಾಹಿತಿ ಕಲೆಹಾಕಿ ಎಸಿಬಿ ಅಧಿಕಾರಿಗಳು ವಿವಿಧೆಡೆ ಏಕಾಏಕಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು, ಧಾರವಾಡ, ಬೆಳಗಾವಿ, ಉತ್ತರಕನ್ನಡ ಸೇರಿದಂತೆ ಹಲವು ಕಡೆ ಅಧಿಕಾರಿಗಳ ಮನೆ ಮೇಲೆ ದಾಳೆ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.