ಮಂಗ್ಳೂರಿನಿಂದ ಬೆಂಗ್ಳೂರಿಗೆ ವಿಮಾನ ಮೂಲಕ ಹಾರಿತು ಜೀವಂತ ಹೃದಯ
ಮಂಗಳೂರು, ಫೆಬ್ರವರಿ 22 : ಇದೇ ಮೊದಲ ಬಾರಿಗೆ ಮಂಗಳೂರಿನ ಎ.ಜೆ.ಆಸ್ಪತ್ರೆಯಿಂದ ವಿಮಾನದ ಮೂಲಕ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮಂಗಳವಾರ 'ಜೀವಂತ ಹೃದಯ'ವನ್ನು ಯಶಸ್ವಿಯಾಗಿ ಸಾಗಿಸಲಾಯಿತು.
ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡಿದ್ದ ಮೂಡಬಿದ್ರೆಯ ಪಡುಮಾರ್ನಾಡಿನ ನಿವಾಸಿ ನಿವಾಸಿ ಸತೀಶ್ (28) ಅವರ ಹೃದಯ,ಲಿವರ್, ಕಿಡ್ನಿಗಳನ್ನು ದಾನ ಮಾಡಿ ಸತೀಶ್ ಕುಟುಂಬಸ್ಥರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಸತೀಶ್ ಅವರು ಫೆಬ್ರವರಿ 18ರ ರಾತ್ರಿ ಕಾರ್ಕಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಾರ್ಕಳದ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಫೆಬ್ರವರಿ 19ರಂದು ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಸೇರಿಸಲಾಗಿತ್ತು.
ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಸತೀಶ್ ರ ತಂದೆ ರಾಘವ ಆಚಾರ್ ಮತ್ತು ತಾಯಿ ಸುಲೋಚನಾ, ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಲಾಗಿದೆ ಎಂದು ವೈದ್ಯರಿಗೆ ತಿಳಿಸಿದ್ದಾರೆ.
ಎ.ಜೆ.ಆಸ್ಪತ್ರೆಯ ಸಿಬ್ಬಂದಿ ತ್ವರಿತವಾಗಿ ಝೋನಲ್ ಕೋರ್ಡಿನೇಶನ್ ಕಮಿಟಿ ಆಫ್ ಕರ್ನಾಟಕ ಫಾರ್ ಟ್ರಾನ್ಸ್ ಪ್ಲಾಂಟೆಶನ್ (ಝೆಡ್ ಸಿಸಿಕೆ) ಸಂಸ್ಥೆಯನ್ನು ಸಂಪರ್ಕಿಸಿ ಅಂಗಾಂಗ ಕಸಿಗೆ ಅಗತ್ಯವಿರುವ ಕಾನೂನು ಪರವಾನಗಿಗಳನ್ನು ಮತ್ತು ಅಂಗಾಂಗ ಸ್ವೀಕರಿಸುವವರ ಪಟ್ಟಿಯನ್ನು ತಯಾರಿಸಿದರು.
ಕಾನೂನು ಪರವಾನಗಿಯ ನಂತರ ಅಂಗಾಂಗಗಳ ಕಸಿಯನ್ನು ಮಾಡುವ ವೈದ್ಯರ ತಂಡವು ಬೆಂಗಳೂರಿನಿಂದ ಮಂಗಳೂರಿಗೆ ಮಂಗಳವಾರ ಆಗಮಿಸಿ ಯಶಸ್ವಿಯಾಗಿ ಕಸಿ ಮಾಡಿದರು.
ದಾನಿಯಿಂದ ಪಡೆದ ಅಂಗಾಂಗಗಳನ್ನು ಝೆಡ್ ಸಿಸಿಕೆಯವರ ನಿರ್ದೇಶನದ ಮೇಲೆ ದಾನ ಮಾಡಲಾಯಿತು. ಮೃತ ಸತೀಶ್ ರ ಹೃದಯವನ್ನು ಬೆಂಗಳೂರಿನ ಎಂ. ಎಸ್.ರಾಮಯ್ಯ ಆಸ್ಪತ್ರೆಗೆ, ಲಿವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ, ಕಿಡ್ನಿಗಳನ್ನು ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಎ. ಜೆ. ಆಸ್ಪತ್ರೆಯ ರೋಗಿಗಳಿಗೆ ಕಸಿ ಮಾಡಲು ತೀರ್ಮಾನಿಸಲಾಗಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications