ದೇವರ ಹೆಸರಿನ ವೈನ್ ಶಾಪ್ ತೆರವಿಗೆ ಕ್ರಮ

Recommended Video

      ಏನೇ ಬಂದರೂ , ನಿರ್ಧಾರದಿಂದ ಹಿಂದೆ ಸರಿಯೊಲ್ಲವಂತೆ ಅಮಿತ್ ಶಾ | AMITH SHAH | BJP

      ಮಂಗಳೂರು, ಡಿಸೆಂಬರ್ 16: ವೈನ್ ಶಾಪ್, ಬಾರ್ ಗಳಿಗೆ ದೇವರ ಹೆಸರಿನ ನಾಮಫಲಕಗಳಿದ್ದರೆ ಅವುಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

      ಬೆಳ್ತಂಗಡಿ ತಾಲ್ಲೂಕಿನ ಆಳದಂಗಡಿಯ ಸುಂಕದಕಟ್ಟೆ ಮಹಗಣಪತಿ ದೇವಸ್ಥಾನದಲ್ಲಿ ಭಾನುವಾರ ಮಾತನಾಡಿದ ಅವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.

      ದೇವಸ್ಥಾನಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ರಾಜ್ಯದಲ್ಲಿ ದೇವರ ಹೆಸರಿನಲ್ಲಿರುವ ಬಾರ್ ಮತ್ತು ವೈನ್ ಶಾಪ್ ಗಳ ನಾಮಫಲಕವನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

      Action For The Opening Of Gods Named Wine Shop

      ಪ್ರಜಾಪ್ರಭುತ್ವದಲ್ಲಿ ಚರ್ಚೆಯ ಮೂಲಕ ತೀರ್ಮಾನ ಕೈಗೊಳ್ಳಲು ಸಾಧ್ಯ, ಅಮತೋಲನ ಆಡಳಿತ ನಡೆಸಿದರೆ ಯಾರಿಗೂ ಅಂಜುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದಾರೆ.

      ಆಳದಮಗಡಿಯ ಮಹಾಗಣಪತಿ ದೇವಸ್ಥಾನ ಸುಂದರವಾಗಿ ನಿರ್ಮಾಣವಾಗುತ್ತಿದೆ, ಇದಕ್ಕೆ ಹತ್ತು ದಿವಸಗಳಲ್ಲಿ ಇಲಾಖೆಯಿಂದ ಗರಿಷ್ಠ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಧಾರ್ಮಿಕ ಸಭೆಯಲ್ಲಿ ಮಾತನಾಡುತ್ತಾ ಭರವಸೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+