Get Updates
Get notified of breaking news, exclusive insights, and must-see stories!

ಅಕ್ರಮ ಮರಳುಗಾರಿಕೆ,ಮಾದಕ ದ್ರವ್ಯ ಕಡಿವಾಣಕ್ಕೆ ಕ್ರಮ: ದ.ಕನ್ನಡ ಎಸ್‌ಪಿ

ಮಂಗಳೂರು, ಜನವರಿ 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ, ಗಾಂಜಾ ಸಹಿತ ಮಾದಕ ದ್ರವ್ಯ ಜಾಲವು ಪೊಲೀಸ್ ಇಲಾಖೆಗೆ ಸವಾಲಾಗಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅವುಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ ಪಿ, ಬಿ.ಎಂ.ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಅತೀ ಸೂಕ್ಷ್ಮ ಜಿಲ್ಲೆ ಎಂಬುದು ತಿಳಿದಿದೆ. ಸಮಸ್ಯೆಗಳು ಆದಾಗ ಅಥವಾ ಸವಾಲುಗಳು ಎದುರಾದಾಗ ಅವುಗಳನ್ನು ಹೇಗೆ ನಿಭಾಯಿಸಬಹುದು ಎಂಬುದರ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ ಅವರು ಮರಳುಗಾರಿಕೆ, ಗಾಂಜಾ ಸಹಿತ ಮಾದಕ ದ್ರವ್ಯ ಜಾಲವು ಪೊಲೀಸ್ ಇಲಾಖೆಗೆ ಸವಾಲಾಗಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅವುಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಸ್ಪಷ್ಟ ಪಡಿಸಿದರು.

ಸಾರ್ವಜನಿಕರಿಗೆ ಪೊಲೀಸರ ಮತ್ತು ಪೊಲೀಸ್ ಠಾಣೆಗಳ ಬಗ್ಗೆ ಭಯವಿದೆ. ಅದನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ಸಂವಹನದ ಕೊರತೆ ಇದೆ. ಇದರಿಂದ ಸಮಸ್ಯೆಗಳು ಜಾಸ್ತಿಯಾಗುತ್ತದೆ. ಸಮಾಜಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲೂ ಸಾರ್ವಜನಿಕರು ಮುಂದಾಗಬೇಕು ಎಂದು ಅವರು ಕರೆ ನೀಡಿದರು.

Action will be definitely be taken against drug smuggling- S P Lakshmi Prasad

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಮೊದಲಿನಂತಿಲ್ಲ. ಅದನ್ನು ಸಾಕಷ್ಟು ಮಟ್ಟಿಗೆ ನಿಗ್ರಹಿಸಲಾಗಿದೆ. ಆರಂಭದ ದಿನಗಳಿಗೆ ಹೋಲಿಸಿದರೆ ಈಗ ನಕ್ಸಲ್ ಚಟುವಟಿಕೆ ಅಷ್ಟೇನು ಇಲ್ಲ. ಇದಕ್ಕೆ ಪೊಲೀಸ್ ಇಲಾಖೆ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಸಿಕ್ಕಿದೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+