ಮಂಗಳೂರಲ್ಲಿ ವ್ಯಾಲೆಂಟೈನ್ ಡೇ ವಿರೋಧಿಸಿ ಹೂ ಗುಚ್ಛದ ಅಂಗಡಿಯ ಮೇಲೆ ದಾಳಿ
ಮಂಗಳೂರು, ಫೆಬ್ರವರಿ 14: ಮಂಗಳೂರಿನಲ್ಲಿ ಪ್ರೇಮಿಗಳ ದಿನವನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಅಂಗಡಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಬೈಕಿನಲ್ಲಿ ಬಂದ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗುವ ಯುವಕರ ಗುಂಪೊಂದು ಹೂ ಗುಚ್ಛ ಮಾರಾಟ ಮಾಡುವ ಅಂಗಡಿಯೊಂದರ ಮೇಲೆ ದಾಳಿ ನಡೆಸಿದೆ. ನಗರದ ಕರಂಗಲಪಾಡಿ ಬಳಿ ಈ ಘಟನೆ ನಡೆದಿದೆ.
ಕರಂಗಲಪಾಡಿ ವೃತ್ತದ ಬಳಿಯೇ ಇರುವ ಐರೀಶ್ ಹೂ ಗುಚ್ಛ ತಯಾರಿಸಿ ಕೊಡುವ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ವ್ಯಾಲೆಂಟೈನ್ ಡೇ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಗುಲಾಬಿ ಹೂಗಳಿಂದ ಶೃಂಗಾರಗೊಂಡಿದ್ದ ಅಂಗಡಿಗೆ ಬಂದ ಯುವಕರ ಪಡೆ ದಾಂಧಲೆ ನಡೆಸಿದೆ.
ಹೂ ಕುಂಡಗಳಿಗೆ ಹಾನಿ ಮಾಡಿದ ಯುವಕರ ಪಡೆ ಕೃತ್ಯ ಎಸಗಿ ಪರಾರಿಯಾಗಿದೆ. ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿದ ಯುವಕರ ಬಂಧನಕ್ಕೆ ಬಲೆ ಬೀಸಲಾಗಿದೆ.

ಹಿಂದೂ ಸಂಘಟನೆಗಳಿಂದ ಪ್ರೇಮಿಗಳ ದಿನಾಚರಣೆಗೆ ವಿರೋಧವಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ನಡೆಸಿತ್ತು. ಪ್ರೇಮಿಗಳು ದಿನದಂದು ಗಲಾಟೆಗೆ ಕಾರಣವಾಗಬಾರದೆಂದು ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ವಹಿಸಿತ್ತು. ಆದರೆ ಈ ನಡುವೆಯೂ ದಾಳಿ ನಡೆದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications