ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪೇಂದ್ರ ಪಕ್ಷ ಸ್ಥಾಪನೆ ಮಾಡುವುದು ಸಿನಿಮಾ ಮಾಡಿದಂತಲ್ಲ: ನಾರಾಯಣ ಗೌಡ

|
Google Oneindia Kannada News

ಮಂಗಳೂರು, ಆಗಸ್ಟ್ 14: "ನಾಯಕ ನಟ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದು ಸಿನಿಮಾ ಮಾಡಿದಂತೆ ಅಲ್ಲ," ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮಂಗಳೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಯೋಜಿಸಿದ್ದ ಜಿಲ್ಲಾ ಕಾರ್ಯಕರ್ತರ ಚಿಂತನ ಮಂಥನ ಸಭೆಯಲ್ಲಿಉದ್ದೇಶಿಸಿ ಮಾತನಾಡಿದ ಅವರು, "ಕರ್ನಾಟಕಕ್ಕೆ ಪ್ರಾದೇಶಿಕ ಪಕ್ಷದ ಅಗತ್ಯ ಇದೆ. ಹಾಗೆಂದು ಉಪೇಂದ್ರ ಒಬ್ಬರೇ ಹೊಸ ಪಕ್ಷ ಕಟ್ಟುತ್ತೇನೆ ಎಂದರೆ ಅದು ಸಾಧ್ಯವಿಲ್ಲ," ಎಂದು ಅವರು ತಿಳಿಸಿದರು.

Actor Upendra starting up a new political party is not easy as film - Narayana Gowda

"ರಾಜಕೀಯ ಪಕ್ಷ ಕಟ್ಟುವುದು ಸಿನಿಮಾ ಮಾಡಿದಂತೆ ಅಲ್ಲ. ಎಲ್ಲರ ಜೊತೆ ಸಮಾಲೋಚನೆ ನಡೆಸಿ ಮುಂದಡಿ ಇಟ್ಟರೆ ಉತ್ತಮ," ಎಂದು ಅವರು ಕಿವಿಮಾತು ಹೇಳಿದರು. ರಾಜಕೀಯ ಪಕ್ಷ ಕಟ್ಟುವುದು ಬಿಡುವುದಕ್ಕಷ್ಟೇ ಸೀಮಿತವಾಗಿರಬಾರದು ಎಂದು ಹೇಳಿದ ಅವರು ಉಪೇಂದ್ರ ಅವರ ಪಕ್ಷವನ್ನು ಬೆಂಬಲಿಸುವ ಬಗ್ಗೆ ಯೋಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

English summary
Actor Upendra starting up a new political party is not easy as film making or acting in film said Narayana Gowda the president of the pro-Kannada organization Karnataka Rakshana Vedike here in Mangaluru on Aug 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X