ಪುತ್ತೂರು ಕಂಬಳದಲ್ಲಿ ನಟಿ ಸಾನ್ಯ ಐಯರ್ ವಿವಾದ: ಮಹಾಲಿಂಗೇಶ್ವರನ ಮೊರೆ ಹೋದ ಸಮಿತಿ
ನಟಿ ಸಾನ್ಯ ಐಯರ್ ವಿವಾದದ ಬಳಿಕ ಪುತ್ತೂರು ಜೋಡುಕೆರೆ ಕಂಬಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವರ ವಿರುದ್ಧ ಕಂಬಳ ಸಮಿತಿ ದೇವರ ಮೊರೆ ಹೋಗಿದೆ. ನಿಂದಿಸಿದವರನ್ನು ನೀನೇ ನೋಡಿಕೋ ಎಂದು ಮಹಾಲಿಂಗೇಶ್ವರ ನ ಬಳಿ ಕಂಬಳ ಸಮಿತಿ ಪ್ರಾರ್ಥನೆ ಮಾಡಿದೆ.
ಮಂಗಳೂರು, ಫೆಬ್ರವರಿ 2: ಪುತ್ತೂರಿನಲ್ಲಿ ನಡೆದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದಲ್ಲಿ ನಟಿ ಸಾನ್ಯ ಐಯರ್ಗೆ ಕಿರುಕುಳ ವಿಚಾರವಾಗಿ ಅನಾವಶ್ಯಕವಾಗಿ ಕಂಬಳ ಸಮಿತಿಯನ್ನು ಗುರಿಮಾಡಲಾಗುತ್ತಿದೆ ಎಂದು ಪುತ್ತೂರು ಕಂಬಳ ಸಮಿತಿ, ಪುತ್ತೂರು ಸೀಮೆಯ ಹತ್ತೂರಿನ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ.
ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ ಸಮಿತಿ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದೆ. ನಟಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಘಟನೆಗೆ ಕಂಬಳ ಸಮಿತಿಯನ್ನು ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಘಟನೆಗೂ, ಸಮಿತಿಗೂ ಯಾವುದೇ ಸಂಬಂಧವಿಲ್ಲ. ಆದರೂ ಕಂಬಳ ಸಮಿತಿಯನ್ನು ದೂರಲಾಗಿದೆ. ಕೆಟ್ಟ ಶಬ್ಧಗಳಿಂದ ಕಂಬಳ ಸಮಿತಿಯನ್ನು ನಿಂದಿಸಲಾಗಿದೆ. ನಿಂದಿಸಿದವರನ್ನು ನೀನೇ ನೋಡಿಕೋ ಎಂದು ಮಹಾಲಿಂಗೇಶ್ವರ ನ ಬಳಿ ಕಂಬಳ ಸಮಿತಿ ಪ್ರಾರ್ಥನೆ ಮಾಡಿದೆ.
ಪ್ರಾರ್ಥನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, "ನಟಿ ಸಾನ್ಯ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಆಕೆ ಹಿಂದಿರುಗಿದ್ದಾರೆ. ಆದರೆ ಆಕೆ ಮತ್ತೆ ಕಂಬಳ ಗದ್ದೆಗೆ ಬಂದ ವಿಚಾರ ಸಮಿತಿಯ ಗಮನಕ್ಕೆ ಬಂದಿಲ್ಲ. ಯಾರೋ ಅವರೊಂದಿಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಕಂಬಳ ಸಮಿತಿಯನ್ನು ಗುರಿ ಮಾಡೋದು ತಪ್ಪು. ಈ ಕಾರಣಕ್ಕಾಗಿ ದೇವರ ಮುಂದೆಯೇ ನ್ಯಾಯ ಕೇಳಲು ಬಂದಿದ್ದೇವೆ" ಎಂದಿದ್ದಾರೆ.

ಘಟನೆಯ ಬಗ್ಗೆ ಸಾನ್ಯ ಪೊಲೀಸ್ ದೂರು ನೀಡಲಿ. ಅವರಿಗೆ ಬೇಕಾದ ಎಲ್ಲಾ ಸಹಾಯ ನಾವು ಮಾಡುತ್ತೇವೆ. ಇದೇ ಘಟನೆಯನ್ನು ಮುಂದಿಟ್ಟು ಕಂಬಳ ಸಮಿತಿಯ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಹಿಂದೆ ಕೆಲವು ಶಕ್ತಿಗಳು ಕೆಲಸ ಮಾಡುತ್ತಿದೆ. ಹಿಂದೂ,ಮುಸ್ಲಿಂ ರೂಪವನ್ನೂ ನೀಡಲಾಗುತ್ತಿದೆ. ಹೀಗೆ ಅಪಪ್ರಚಾರ ಮಾಡುವವರನ್ನು ದೇವರೇ ನೋಡಿಕೊಳ್ಳುತ್ತಾರೆ ಎಂದು ಶಕುಂತಲಾ ಶೆಟ್ಟಿ ಹೇಳಿದ್ದಾರೆ.

ಮಾತು ಮುಂದುವರಿಸಿದ ಶಂಕುತಲಾ ಶೆಟ್ಟಿ , "ಕಂಬಳ ನಡೆಯುವ ದೇವಮಾರು ಗದ್ದೆಯಲ್ಲಿ ಯಾರೂ ಯಾವ ಅನ್ಯಾಯವನ್ನೂ ಮಾಡಬಾರದು. ಅನ್ಯಾಯ ಮಾಡಿದವರಿಗೆ ಮಹಾಲಿಂಗೇಶ್ವರ ಕ್ಷೇಮ ನೀಡದ ಹಲವು ಜಲ್ವಂತ ಸಾಕ್ಷಿಗಳು ನಮ್ಮಲ್ಲಿ ಇವೆ. ಆದರೂ ಅಹಿತಕರ ಘಟನೆ ನಡೆಸಲು ಹುನ್ನಾರ ಎಬ್ಬಿಸಲಾಗಿದೆ. ಕಂಬಳ ಐತಿಹಾಸಿಕವಾಗಿ ಯಶಸ್ಸು ಕಂಡಿರುವುದನ್ನು ಸಹಿಸಲಾಗದೇ ಕೆಲವರು ಪುಕಾರು ಎಬ್ಬಿಸುತ್ತಿದ್ದಾರೆ" ಎಂದು ದೂರಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications