ಮಂಗಳೂರಿನಲ್ಲಿ ಕಾಂತಾರ ನಾಯಕಿ: ಕಟೀಲು ಕ್ಷೇತ್ರಕ್ಕೆ ನಟಿ ಸಪ್ತಮಿ ಗೌಡ ಭೇಟಿ
ಮಂಗಳೂರು, ನವೆಂಬರ್ 16: ಕಾಂತಾರ ಚಿತ್ರದ ನಾಯಕಿ ಸಪ್ತಮಿ ಗೌಡ ಮಂಗಳೂರು ಕ್ಷೇತ್ರ ದರ್ಶನ ಮಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ಸಪ್ತಮಿ ಗೌಡ ಭೇಟಿ ನೀಡಿದ್ದಾರೆ.
ಸಪ್ತಮಿ ಗೌಡ ಅವರ ಜೊತೆ ನಟ ಸನಿಲ್ ಗುರು, ಸಪ್ತಮಿ ಗೌಡ ತಾಯಿ ಶಾಂತಿ ಕೂಡ ಕಟೀಲಿಗೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಳದ ಅರ್ಚಕರು ಸಪ್ತಮಿ ಗೌಡ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದ್ದಾರೆ.
ದೇವರ ದರ್ಶನ ಪಡೆದ ಬಳಿಕ ನಟಿ ಸಪ್ತಮಿ ಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, "ಕಾಂತಾರ ಯಶಸ್ವಿನ ಬಗ್ಗೆ ಹೆಮ್ಮೆ ಇದೆ. ತುಳುನಾಡಿನ ದೈವಾರಾದನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರದ ನಂತರ ತಿಳಿದಿದೆ. ಬೇರೆ ಬೇರೆ ಸಿನಿಮಾದ ಬಗ್ಗೆ ಮಾತುಕತೆ ನಡೆಯುತ್ತಿದೆ. ತುಳು ಭಾಷೆಯ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ಖಂಡಿತ ನಟಿಸುವೆ" ಎಂದು ಹೇಳಿದ್ದಾರೆ.

ಮಂಗಳವಾರ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸಪ್ತಮಿ ಗೌಡ ಭೇಟಿ ನೀಡಿದ್ದರು. ಆದಿ ಸ್ಥಳದಲ್ಲೇ ಕೆಲ ಸಮಯ ಕಳೆದಿದ್ದ ಸಪ್ತಮಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟಿ ಸಪ್ತಮಿ ಅವರನ್ನು ಕ್ಷೇತ್ರದ ಸಮಿತಿ ಸದಸ್ಯರು ಗೌರವದಿಂದ ಬರಮಾಡಿಕೊಂಡಿದ್ದು, ಕ್ಷೇತ್ರದ ಮಹಿಮೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಪ್ತಮಿ, "ತುಳು ನಾಡಿನ ದೈವಗಳ ಆಶೀರ್ವಾದದಿಂದ ತಮ್ಮ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ದೈವಗಳ ಮೇಲೆ ನನಗೂ ನಂಬಿಕೆ ಇದೆ. ಈ ಕಾರಣದಿಂದಾಗಿಯೇ ಕಾಂತಾರ ಸಿನಿಮಾದ ಮೂಲಕ ನಾಡಿಗೆ ನನ್ನ ಪರಿಚಯವಾದೆ. ಇದಕ್ಕೆಲ್ಲ ದೈವಗಳ ಆಶೀರ್ವಾದವೇ ಕಾರಣ. ಸಿನಿಮಾ ಮಾಡಲುವಾಗ ಅಷ್ಟೇ ಶ್ರದ್ಧೆಯಿಂದ ಕೆಲಸ ಮಾಡಿದೆ. ಈಗಲೂ ಅದೇ ಶ್ರದ್ಧೆಯಿಂದ ಇಲ್ಲಿಗೆ ಬಂದಿರುವೆ" ಎಂದು ಹೇಳಿದ್ದರು.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications