ಅದಾನಿ ಗ್ರೂಪ್ಗೆ ಮಂಗಳೂರು ವಿಮಾನ ನಿಲ್ದಾಣ; ಮುಹೂರ್ತ ಫಿಕ್ಸ್
ಮಂಗಳೂರು, ಅಕ್ಟೋಬರ್ 16 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಮುಹೂರ್ತ ನಿಗದಿಯಾಗಿದೆ. ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ವಿಮಾನ ನಿಲ್ದಾಣದ ನಿರ್ವಹಣೆಯನ್ನು ವಹಿಸಲಾಗಿದೆ.
ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಯೋಜನೆಯು ಅಂತಿಮ ಘಟ್ಟ ತಲುಪಿದೆ. 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ನವೆಂಬರ್ 15ರೊಳಗೆ ಖಾಸಗಿಯ ಪಾಲಾಗಲಿದೆ.
ಅಗತ್ಯವಿರುವ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ನವೆಂಬರ್ 1ರಿಂದಲೇ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗುತ್ತದೆ. ಪ್ರಸ್ತುತ ಹಸ್ತಾಂತರವಾದರೂ ಉದ್ಯೋಗಿಗಳು ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದ್ದು, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಓ ನೇಮಕ ಮಾಡಲಿದೆ.

ಒಂದು ವರ್ಷ ಜಂಟಿ ಕಾರ್ಯ ನಿರ್ವಹಣೆ
ಒಂದು ವರ್ಷಗಳ ಕಾಲ ಅದಾನಿ ಸಂಸ್ಥೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಲಿವೆ. ಹೂಡಿಕೆ, ಟರ್ಮಿನಲ್ ಕಟ್ಟಡದ ವಾಣಿಜ್ಯ ಚಟುವಟಿಕೆ, ಲಾಭ-ನಷ್ಟದ ವ್ಯವಹಾರ, ವಿಮಾನಯಾನ ಸಂಸ್ಥೆಗಳು ನೀಡುವ ಬಾಡಿಗೆ ಈ ವ್ಯವಹಾರಗಳನ್ನು ಅದಾನಿ ಸಂಸ್ಥೆ ನೋಡಿಕೊಳ್ಳಲಿದೆ. ಪ್ರಾಧಿಕಾರ ವಿಮಾನಗಳ ಆಗಮನ, ನಿರ್ಗಮನ ವಿಚಾರ ನೋಡಿಕೊಳ್ಳಲಿದ್ದು, ಸಂಸ್ಥೆಗೆ ಮಾರ್ಗದರ್ಶಕರಾಗಿ ಕೆಲಸ ಮಾಡಲಿದೆ.

ಹೊಸ ನೇಮಕಾತಿ ಇಲ್ಲ
ಅದಾನಿ ಸಂಸ್ಥೆ ವಿಮಾನ ನಿಲ್ದಾಣದ ನಿರ್ವಹಣೆ ನೋಡಿಕೊಳ್ಳಲು ಆರಂಭಿಸಿದರೂ ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂಬ ಮಾಹಿತಿ ಇದೆ.

ಬಾಡಿಗೆಗಳು ಪರಿಷ್ಕರಣೆ ಆಗಲಿವೆ
ವಿಮಾನ ನಿಲ್ದಾಣದ ವಾಣಿಜ್ಯ ಚಟುವಟಿಕೆ ಅದಾನಿ ಸಂಸ್ಥೆ ಪಾಲಾದ ಬಳಿಕ ಟರ್ಮಿನಲ್ ಕಟ್ಟಡದ ಬಾಡಿಗೆ ಪರಿಷ್ಕರಣೆ ಆಗುವ ನಿರೀಕ್ಷೆ ಇದೆ. ಪ್ರತ್ಯೇಕ ಏರ್ ಪೋರ್ಟ್ ಕಾಂಪ್ಲೆಕ್ಸ್, ಮಾಲ್ ನಿರ್ಮಾಣವಾಗಲಿದೆ. ಅದಾನಿ ಸಂಸ್ಥೆ ನಿಲ್ದಾಣದ ಅಭಿವೃದ್ಧಿಗಾಗಿ ಹೂಡಿಕೆಯನ್ನು ಸಹ ಮಾಡಲಿದೆ.

50 ವರ್ಷಗಳಿಗೆ ಗುತ್ತಿಗೆ
ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ವಹಣೆ ಮಾಡಲಾಗುತ್ತದೆ. 2018ರಲ್ಲಿ ಇದಕ್ಕಾಗಿ ಟೆಂಡರ್ ಆಹ್ವಾನ ಮಾಡಲಾಗಿತ್ತು. 2019ರ ಜುಲೈನಲ್ಲಿ ಕೇಂದ್ರ ಸರ್ಕಾರ ಅದಾನಿ ಸಂಸ್ಥೆಗೆ 50 ವರ್ಷಗಳ ಕಾಲ ನಿರ್ವಹಣೆಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿತ್ತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications