ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸದ ಏಜೆನ್ಸಿ ಬ್ಲಾಕ್ ಲಿಸ್ಟ್ಗೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಡಿಸೆಂಬರ್ 03: ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸದ ಏಜೆನ್ಸಿ ಬ್ಲಾಕ್ ಲಿಸ್ಟ್ಗೆ ಸೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸಲು ನೀಡಿತ್ತು. ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಈ ಏಜೆನ್ಸಿ ನಿರ್ವಹಣೆ ಸರಿಯಿರಲಿಲ್ಲ. ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡುತ್ತಿರಲಿಲ್ಲ. ಅವರ ಇಎಸ್ಸೈ, ಪಿಎಫ್ ಕಟ್ಟಿರಲಿಲ್ಲ. ಇದನ್ನು ರಾಜ್ಯ ಸರ್ಕಾರ ಕಟ್ಟಲು ನೋಡುತ್ತಿದೆ. ಆದರೆ ಅದಕ್ಕೆ ಮೊದಲು ಆ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ಗೆ ಹಾಕುವ ಕೆಲಸ ಆಗುತ್ತಿದೆ ಎಂದರು.

ಇದರೊಂದಿಗೆ ನಾಲ್ಕು ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಜೊತೆಗೆ ಡಯಾಲಿಸ್ ಮೆಷಿನ್ ಕೆಟ್ಟು ಹೋದ ಕಡೆ ಅದನ್ನು ಬದಲಾಯಿಸಲು ಆಗುತ್ತಿಲ್ಲ. ಅದನ್ನು ಈಗಿರುವ ಏಜೆನ್ಸಿ ಮಾಡಬೇಕು. ಇಲ್ಲದಿದ್ದಲ್ಲಿ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕು. ಯಾವುದೂ ಆಗದಿದ್ದಲ್ಲಿ ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.
ಸರ್ಕಾರವೇ ಹೊಸ ಮೆಷಿನ್ ಖರೀದಿಸಿ ನಿರ್ವಹಣೆ ಮಾಡಲು ಚಿಂತಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿಯಲಿ, ಆ ಬಳಿಕ ನಿರ್ಧಾರ ಮಾಡೋಣ. ಡಯಾಲಿಸಸ್ ಸಿಬ್ಬಂದಿಯ ಬಗ್ಗೆ ನಮಗೆ ಕಾಳಜಿಯಿದೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಭ್ರೂಣ ಹತ್ಯೆ ಕೇಸ್ ಆರೋಪವಿದ್ದ ವೈದ್ಯ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಭ್ರೂಣ ಹತ್ಯೆ ಸಂಬಂಧ ತಾನು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಈ ಪ್ರಕರಣವನ್ನು ಸಿಐಡಿ ತನಿಖೆ ಕೊಡಲು ಸಿಎಂಗೆ ಮನವಿ ಮಾಡಿದ್ದೇನೆ. ಬಳಿಕ ಸಿಐಡಿ ತನಿಖೆ ಆಗಬೇಕೆಂದು ಸಿಎಂ ಆದೇಶ ಮಾಡಿದ್ದಾರೆ ಎಂದರು.
ಲೋಪವಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ಅಮಾನತು ಆಗಿದೆ. ಆತ್ಮಹತ್ಯೆ ಮಾಡಿರುವ ಆಯುಷ್ ಅಧಿಕಾರಿ ಡಾ. ಸತೀಶ್ ಅವರು ಇದರಲ್ಲಿ ಶಾಮೀಲಾಗಿದ್ದಾರೆಂಬ ಬಗ್ಗೆಯೂ ಮಾಹಿತಿ ಬಂದಿದೆ. ಆದರೆ ಯಾಕೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗೊತ್ತಿಲ್ಲ. ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದೆಯೇ ನೋಡಬೇಕು. ಇವರ ಮೇಲೆ ಸಾಕಷ್ಟು ಆರೋಪ ಇದೆ. ನಮ್ಮ ಇಲಾಖೆಯ ಅನೇಕ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಅದೆಲ್ಲ ತನಿಖೆಯಲ್ಲಿ ಗೊತ್ತಾಗಬೇಕು. ಪೊಲೀಸರು ತನಿಖೆ ನಡೆಸುತ್ತಾರೆ. ಆದ್ದರಿಂದ ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications