ಅನಾಥವಾಗಿ ಬಿದ್ದ ತುಳುನಾಡಿನ ಜಗಜಟ್ಟಿ ಅಗೋಳಿ ಮಂಜಣ್ಣ ಹೊತ್ತು ತಂದ ದಂಬೆಕಲ್ಲು!
ಮಂಗಳೂರು, ಡಿಸೆಂಬರ್ 13: ತುಳುನಾಡಿನ ವೀರಪುರುಷ ಎಂದೇ ಹೆಸರಾದ 'ಅಗೋಳಿ ಮಂಜಣ್ಣ' ಒಬ್ಬ ಅಸಾಧ್ಯ ಧೈರ್ಯಶಾಲಿ. ಅದು ಎಷ್ಟರಮಟ್ಟಿಗೆ ಅಂದರೆ, ಒಂದೇ ಬಾರಿಗೆ ಹತ್ತು ಮೂಟೆ ಅಕ್ಕಿ ಎತ್ತಬಲ್ಲಂತಹ ಬಲಶಾಲಿ. ಗಟ್ಟಿ ಮುಟ್ಟು ಭೀಮ ಕಾಯದ, ಬಕಾಸುರ ಬಾಯಿಯ, ದಢೂತಿ ವ್ಯಕ್ತಿಯಾದ ತುಳುನಾಡಿನ ಜಗಜಟ್ಟಿ ಅಗೋಳಿ ಮಂಜಣ್ಣ 'ತುಳುನಾಡಿನ ಭೀಮ'ನೆಂದು ಪ್ರಸಿದ್ಧನಾದ ಐತಿಹಾಸಿಕ ಪುರುಷ. ಅಪ್ರತಿಮ ಶಕ್ತಿ, ಸಾಹಸಗಳಿಗೆ ಹೆಸರಾದ ವ್ಯಕ್ತಿ. ಅದ್ಭುತ ಜೀರ್ಣಶಕ್ತಿಯುಳ್ಳ ತಿನಿಸಿಗ.
'ಅಗೋಳಿ' ಎಂಬ ತುಳು ಶಬ್ದಕ್ಕೆ ಅರ್ಥ ಗುಡಾಣ, ಹಂಡೆ ಅಥವಾ ಅಂತಹದೇ ಭಾರಿ ಗಾತ್ರದ ಪಾತ್ರೆ ಎಂದು. ಆ ಪಾತ್ರೆಯಲ್ಲಿ ಊಟ ಮಾಡುವವನು ಅಗೋಳಿ ಮಂಜಣ್ಣ.
ಅಜಾನುಬಾಹು ಅಗೋಳಿ ಮಂಜಣ್ಣ ಮೂಲ್ಕಿ ಸೀಮೆಯ ಅಧಿಪತಿಯಾಗಿ ಪರಾಕ್ರಮ ಮೆರೆದ ತುಳು ನಾಡಿನ ವೀರಪುರುಷ. ಅಂದಾಜು 200 ವರ್ಷಗಳ ಹಿಂದೆ ಮಂಗಳೂರಿನ ಸುರತ್ಕಲ್ ಸನಿಹದ ಚೆಳ್ಯಾರ್ ಗುತ್ತಿನಲ್ಲಿ ಬದುಕಿ ಬಾಳಿದವರು ಅಗೋಳಿ ಮಂಜಣ್ಣ.

ಸಂತಾನ ಭಾಗ್ಯ ಇಲ್ಲದ ಚೇಳ್ಯಾರು ಗುತ್ತುವಿನ ದುಗ್ಗು ಎಂಬುವವರು ಬಪ್ಪನಾಡು ದೇವಿಗೆ ಹರಕೆ ಹೊತ್ತ ಫಲವಾಗಿ ಜನಿಸಿದ ಮಗನೇ ಅಗೋಳಿ ಮಂಜಣ್ಣ. ಮಂಜಣ್ಣರು ಆ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳು ಇಂದಿಗೂ ರಕ್ಷಿಸಿಡಲಾಗಿದೆ.
ಅಗೋಳಿ ಮಂಜಣ್ಣ ಎರ್ಮಾಳಿನಿಂದ ಸುಮಾರು 9 ಕಿ.ಮೀ ದೂರದ ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಹೊತ್ತು ತಂದ ಶಿಲೆಯ ದೊಂಬೆ ಕಲ್ಲು ಇಂದಿಗೂ ಕಾಣ ಬಹುದಾಗಿದೆ. ಈ ಕಲ್ಲು ಸಾಮಾನ್ಯ ಕಲ್ಲಲ್ಲ. ಈ ಕಾಲದಲ್ಲಾದರೆ ಈ ದಂಬೆ ಕಲ್ಲು ಸಾಗಿಸಲು ಸರಕು ಸಾಗಟದ ವಾಹನವೇ ಬೇಕು. ವಾಹನದಲ್ಲಿ ತುಂಬಿಸಲು ಕ್ರೇನ್ ಬೇಕಾದಿತು.

ಅಂತಹ ಗಜ ಗಾತ್ರದ ಕಲ್ಲು, ಗತ ಇತಿಹಾಸ ಸಾರುವ, ಅಗೋಳಿ ಮಂಜಣ್ಣನ ಸಾಹಸ ನೆನಪಿಸುವ ಕಲ್ಲು, ಈಗ ಅನಾಥ ಸ್ಥಿತಿಯಲ್ಲಿದೆ. ಯಾವೊಂದು ರಕ್ಷಣೆ ಇಲ್ಲದೆ ಬಪ್ಪನಾಡು ದೇವಸ್ಥಾನದ ವಠಾರದ ಮೂಲೆಯಲ್ಲಿ ಬಿದ್ದಿದೆ.
ಈ ಹಿನ್ನೆಲೆಯಲ್ಲಿ ಕಲ್ಲಿರುವ ಸ್ಥಳದಲ್ಲಿ ಪೀಠ ಕಟ್ಟ ಬೇಕು. ಅದರ ಮೇಲೆ ದಂಬೆ ಕಲ್ಲಿಡಬೇಕು. ಸುತ್ತಲು ರಕ್ಷಣೆಗೆ ಕಬ್ಬಿಣದ ಬೇಲಿ ಅಳವಡಿಸಬೇಕು ಎಂಬುದು ಜನರ ಆಗ್ರಹವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications