ಭತ್ತ ನಾಟಿ ಮಾಡಲು ದಕ್ಷಿಣ ಕನ್ನಡಕ್ಕೆ ಬಂದ ಗಂಗಾವತಿ ಕೃಷಿ ಕಾರ್ಮಿಕರು
ಮಂಗಳೂರು, ಜುಲೈ.31: ಕಳೆದ ಕೆಲ ದಿನಗಳಿಂದ ಕರಾವಳಿಯಲ್ಲಿ ಮಳೆರಾಯ ಕೊಂಚ ಬಿಡುವು ಪಡೆದಿದ್ದಾನೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಈಗಾಗಲೇ ಭತ್ತದ ನಾಟಿ ಆರಂಭವಾಗಿದ್ದು, ಜಿಲ್ಲೆಯ ಹಲವೆಡೆ ಕೃಷಿ ಕಾರ್ಮಿಕರ ಕೊರತೆ ಎದುರಾಗಿದೆ. ಪರಿಣಾಮ ಕೃಷಿಕರು ಕೈಚೆಲ್ಲಿ ಕೂತಿದ್ದಾರೆ.
ಆದರೆ ಈ ನಡುವೆ ದೂರದ ಕೊಪ್ಪಳದ ಗಂಗಾವತಿಯಿಂದ ಕೃಷಿ ಕಾರ್ಮಿಕರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. 125 ಕೃಷಿ ಕಾರ್ಮಿಕರ ಈ ತಂಡ ಮಂಗಳೂರು ತಾಲೂಕಿನ ಬಜಪೆ ಪರಸರದಲ್ಲಿ ಬೀಡು ಬಿಟ್ಟಿದ್ದು, ನೇಜಿ ನಾಟಿ ಕಾರ್ಯ ಆರಂಭಿಸಿದೆ.
15 ಕಾರ್ಮಿಕರ ಒಂದು ತಂಡದಂತೆ 8 ತಂಡಗಳು ತಾಲೂಕಿನಲ್ಲಿ ಭತ್ತದ ನಾಟಿ ಕಾರ್ಯ ನಡೆಸಿದ್ದಾರೆ. ನಾಟಿ ಮಾಡುವ ಈ ಕೃಷಿ ಕಾರ್ಮಿಕರಲ್ಲಿ ಮಹಿಳೆಯರೇ ಹೆಚ್ಚಾಗಿದ್ದಾರೆ.

ಈ ಅವಧಿಯಲ್ಲಿ ಕೊಪ್ಪಳ, ಗಂಗಾವತಿ ಭಾಗದಲ್ಲಿ ಹೊಲದಲ್ಲಿ ಗಂಡಸರಿಗೆ ಮಾತ್ರ ಕೆಲಸವಿರುತ್ತದೆ. ಮಹಿಳೆಯರಿಗೆ ಕೆಲಸ ಕಡಿಮೆ. ಅಲ್ಲಿ ಹೆಚ್ಚಾಗಿ ಒಣ ಬೇಸಾಯವಾದ ಕಾರಣ ಸ್ವಲ್ಪ ಮಳೆ ಬಂತೆಂದರೆ ಒಮ್ಮೆ ಉಳುಮೆ ಮಾಡಿರುವ ಈ ಕಾರ್ಮಿಕರು ಇಲ್ಲಿ ಕೃಷಿ ಕಾರ್ಮಿಕರಾಗಿ ದುಡಿಯಲು ಬರುತ್ತಾರೆ.
ಈ ಕೃಷಿ ಕಾರ್ಮಿಕರ ತಂಡ ಈಗಾಗಲೇ ಮಂಗಳೂರು ತಾಲೂಕಿನಲ್ಲಿ 50 ಎಕರೆ ಭತ್ತ ನಾಟಿ ಮಾಡಿ ಮುಗಿಸಿದೆ. 1 ಎಕರೆ ನಾಟಿ ಕಾರ್ಯಕ್ಕೆ ಈ ಕಾರ್ಮಿಕರ ತಂಡ 4 ಸಾವಿರ ರೂಪಾಯಿ ಮಜೂರಿ ನಿಗದಿ ಮಾಡುತ್ತದೆ. ಈ ಕಾರ್ಮಿಕರಿಗೆ ಚಹಾ ಕೊಟ್ಟರೆ ಸಾಕು. ಬೇರೇನನ್ನೂ ಕೇಳುವುದಿಲ್ಲ.
ಆದ್ದರಿಂದ ರೈತರು ಈ ಕೃಷಿ ಕಾರ್ಮಿಕರಿಂದಲೇ ಭತ್ತದ ನಾಟಿಮಾಡಿಸಲು ಮುಂದಾಗುತ್ತಿದ್ದಾರೆ.

ಸ್ಥಳೀಯ 22 ಮಂದಿ ಕೃಷಿ ಕಾರ್ಮಿಕರು ಒಂದು ದಿನಕ್ಕೆ ಒಂದು ಎಕರೆ ಜಾಗದಲ್ಲಿ ಭತ್ತ ನಾಟಿ ಮಾಡುತ್ತಾರೆ. ಅದಲ್ಲದೇ ಈ ಸ್ಥಳೀಯ ಕಾರ್ಮಿಕರಿಗೆ ತಲಾ ಒಬ್ಬರಿಗೆ 350 ರೂಪಾಯಿ ಮಜೂರಿ, ಊಟ, ತಿಂಡಿ ,ಚಹಾ ನೀಡಬೇಕು. ಇದನ್ನೆಲ್ಲಾ ಸೇರಿಸಿದರೆ ಒಟ್ಟು ಒಂದು ಎಕರೆಗೆ ಸರಿ ಸುಮಾರು 7,500 ರೂಪಾಯಿ ಮಜೂರಿಯಾಗುತ್ತದೆ.
ಅದೇ ಗಂಗಾವತಿಯ 15 ಮಂದಿಯ ತಂಡ ಒಂದು ದಿನಕ್ಕೆ 2 ಎಕರೆ ಜಾಗ ನಾಟಿ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಗಂಗಾವತಿಯ ಕೃಷಿ ಕಾರ್ಮಿಕರು ಸ್ಥಳೀಯ ರೈತರಿಗೆ ವರದಾನವಾಗಿ ಪರಿಣಮಿಸಿದ್ದಾರೆ. ಕೃಷಿ ಕಾರ್ಮಿಕರೇ ಸಿಗುತ್ತಿಲ್ಲ ಎನ್ನುವ ರೈತರ ಮೊಗದಲ್ಲಿ ಈಗ ಮಂದಹಾಸ ಮೂಡಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications