ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಕನ್ನಡಿಗರು

|
Google Oneindia Kannada News

ಮಂಗಳೂರು, ಮೇ.12: ನೊವೆಲ್ ಕೊರೊನಾ ವೈರಸ್ ಹರಡುವಿಕೆ ಭೀತಿ ನಡುವೆಯೇ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಆರಂಭಿಸಿದೆ.

ಏರ್ ಇಂಡಿಯಾ ವಿಮಾನದ ಮೂಲಕ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಮಂಗಳವಾರ ಸುರಕ್ಷಿತವಾಗಿ ತವರಿಗೆ ಕರೆದುಕೊಂಡು ಬರಲಾಯಿತು. 176 ಮಂದಿ ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು.

Air India Flight Carrying Passengers From Dubai Has Reached Mangaluru

ವಂದೇ ಭಾರತ್ ಮಿಷನ್; ದೇಶಕ್ಕೆ ವಾಪಸ್ ಆದವರು ಎಷ್ಟು ಜನ?ವಂದೇ ಭಾರತ್ ಮಿಷನ್; ದೇಶಕ್ಕೆ ವಾಪಸ್ ಆದವರು ಎಷ್ಟು ಜನ?

ನೊವೆಲ್ ಕೊರೊನಾ ವೈರಸ್ ಭೀತಿಯಲ್ಲೇ ಜೀವನ ಸಾಗಿಸುತ್ತಿದ್ದ ಕನ್ನಡಿಗರನ್ನು ದುಬೈನಿಂದ ತವರಿಗೆ ಕರೆ ತರಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ವೈದ್ಯಕೀಯ ತಪಾಸಣೆ ಹಾಗೂ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.

14 ದಿನ ಕ್ವಾರೆಂಟೈನ್ ಕಡ್ಡಾಯ:

ಕರ್ನಾಟಕಕ್ಕೆ ಆಗಮಿಸಿದ ಬಳಿಕ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಒಂದೊಮ್ಮೆ ಸ್ಕ್ರೀನಿಂಗ್ ಸಂದರ್ಭದಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿದರೆ ಅಂಥವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. 14 ದಿನಗಳ ಕ್ವಾರಂಟೈನ್ ಅವಧಿ ಬಳಿಕ ನಡೆಸಿದ ತಪಾಸಣೆಯಲ್ಲಿ ಕೊರೊನಾ ವೈರಸ್ ನೆಗಟಿವ್ ಬಂದಿದ್ದಲ್ಲಿ ಮಾತ್ರ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ.

English summary
VandeBharatMission: Air India Flight Carrying Passengers From Dubai Has Reached Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X