ಅದಾನಿ ಗ್ರೂಪ್ಗೆ ಮಂಗಳೂರು ವಿಮಾನ ನಿಲ್ದಾಣ: ವಾರಕ್ಕೊಂದು ಪ್ರತಿಭಟನೆ ಎಂದ ಕಾಂಗ್ರೆಸ್
ಮಂಗಳೂರು, ನವೆಂಬರ್ 12: ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಗ್ರೂಪ್ಗೆ ಹಸ್ತಾಂತರಿಸಲಾಗಿದ್ದು, ಇದಾದ ಹಲವು ದಿನಗಳ ನಂತರ ಇದೀಗ ಕಾಂಗ್ರೆಸ್ ಮುಖಂಡರಿಗೆ ಜ್ಞಾನೋದಯವಾದಂತಿದೆ.
ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಅದಾನಿ ಸಂಸ್ಥೆಗೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ತೊಂದರೆ ನೀಡುತ್ತಿದ್ದಾರೆ ಎಂಬುವುದು ಇಡೀ ರಾಷ್ಟ್ರಕ್ಕೆ ಗೊತ್ತಾಗಬೇಕಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು ಎಂದರು.

ಇನ್ನು ಹಲವು ರೀತಿಯಲ್ಲಿ ಮಂಗಳೂರಿನ ಅಭಿವೃದ್ಧಿಗೆ ಕಾರಣರಾದವರನ್ನು ಮೂಲೆಗುಂಪು ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣವನ್ನು ಯಾರನ್ನೂ ಕೂಡ ಕೇಳದೆ ಅದಾನಿ ಸಂಸ್ಥೆಗೆ ನೀಡಲಾಗಿದ್ದು, ಅದಾನಿ ಹೆಸರಿನಡಿಯಲ್ಲೇ ಇದೀಗ ವಿಮಾನ ನಿಲ್ದಾಣ ನಿರ್ವಹಣೆಗೊಳಪಟ್ಟಿದೆ.
ಮಂಗಳೂರಿಗೆ ಯಾವುದೇ ಕೊಡುಗೆ ನೀಡದೆ ಇರುವ ಗೌತಮ್ ಅದಾನಿಗೆ ಮಂಗಳೂರು ವಿಮಾನ ನಿಲ್ದಾಣ ನೀಡಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರಾವಳಿ ಭಾಗದ ಅನೇಕ ನಾಯಕರ ಸತತ ಪ್ರಯತ್ನದಿಂದಾಗಿ ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣವಾಗಿ ಅಭಿವೃದ್ಧಿಗೊಂಡಿದೆ. ಆದರೆ, ಇದೀಗ ಅದಾನಿ ಸಂಸ್ಥೆಗೆ ನೀಡಿದ ಸಂದರ್ಭದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಜಿಲ್ಲೆಯ ಜನ ನಾಯಕರು ಮೌನವಾಗಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಖಾಸಗೀಕರಣ ವಿರೋಧಿಸಿ ಈಗಾಗಲೇ ಪ್ರತಿಭಟನೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿವಾರದಲ್ಲಿ ಒಂದು ದಿನ ಕೆಂಜಾರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications