2 ಕಾಲು ಜೋಡಿಸಿ ಮರು ಜೀವ ಕೊಟ್ಟ ಮಂಗಳೂರು ವೈದ್ಯರು!
ಮಂಗಳೂರು, ಡಿಸೆಂಬರ್ 15 : ಎರಡೂ ಕಾಲುಗಳು ತುಂಡಾಗಿದ್ದ ಪುಟ್ಟ ಕಂದಮ್ಮನ ಕಾಲುಗಳನ್ನು ಮರು ಜೋಡಿಸುವಲ್ಲಿ ಮಂಗಳೂರಿನ ವೈದ್ಯರು ಯಶಸ್ವಿಯಾಗಿದ್ದಾರೆ. ವಿಶ್ವದ 14 ನೇ ಅತೀ ವಿರಳ ಘಟನೆ ಇದಾಗಿದೆ.
2017ರ ಏಪ್ರಿಲ್ 29 ರಂದು ಕೇರಳದ ಪಯ್ಯನೂರಿನಲ್ಲಿ ನಡೆದ ರೈಲು ಅಫಘಾತದಲ್ಲಿ ಎರಡೂವರೆ ವರ್ಷದ ಮಗು ಮಹಮ್ಮದ್ ಸಾಲೆಯ ಕಾಲುಗಳೆರಡೂ ತುಂಡಾಗಿ ಬೇರ್ಪಟ್ಟಿತ್ತು. ಘಟನೆಯಲ್ಲಿ ಮಗುವಿನ ತಾಯಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಮಗುವನ್ನು ರೈಲ್ವೆ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆಗೆ ಪಯ್ಯನೂರಿನ ಆಸ್ಪತ್ರೆಯಿಂದ ಮಂಗಳೂರಿನ ಎಜೆ ಆಸ್ಪತ್ರೆ ಗೆ ಬೇರ್ಪಟ್ಟ ಎರಡೂ ಕಾಲನ್ನು ಥರ್ಮಾಕೋಲ್ ನ ಐಸ್ ಬಾಕ್ಸ್ ನಲ್ಲಿಟ್ಟು ತಂದಿದ್ದರು.

ಎಜೆ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಡೀನ್ ಡಾ.ದಿನೇಶ್ ಕದಂ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡ ಸತತ 7 ಗಂಟೆಗಳ ಕಾಲ ಮಗುವಿನ ಕಾಲು ಜೋಡಣೆಯ ಮೈಕ್ರೋ ವ್ಯಾಸ್ಕ್ಯುಲರ್ ಪ್ಲಾಸ್ಟಿಕ್ ಸರ್ಜರಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ಮಗುವಿನ ಕಾಲನ್ನು ಜೋಡಣೆ ಮಾಡಲಾಗಿದೆ.
ಸಂಪೂರ್ಣವಾಗಿ ಬೇರ್ಪಟ್ಟ ಕಾಲುಗಳು ಮತ್ತು ಮಂಡಿ ಮೇಲ್ಭಾಗದಲ್ಲಿ ಕತ್ತರಿಸಿದ ಕಾಲಿನ ಮರು ಜೋಡಣೆ ಯಶಸ್ವಿಯಾಗಿ ನಡೆಸಿದ್ದು ದೇಶದಲ್ಲಿಯೇ ಪ್ರಥಮವಾಗಿದೆ.
ಈವರೆಗೆ ಜಗತ್ತಿನಾದ್ಯಂತ 13 ಜನರಲ್ಲಿ ಮಾತ್ರ ಈ ಎರಡು ಕಾಲುಗಳ ಬೇರ್ಪಟ್ಟ ಮರು ಜೋಡಣೆಯ ಮೈಕ್ರೋ ವ್ಯಾಸ್ಕ್ಯುಲರ್ ಚಿಕಿತ್ಸೆ ಯಶಸ್ವಿಯಾಗಿದ್ದು, ಇದು 14ನೇ ಪ್ರಕರಣವಾಗಿದೆ.
ಮೊಣಕಾಲಿನ ಮೇಲ್ಭಾಗದಿಂದ ಕತ್ತರಿಸಿದ ಕಾಲನ್ನು ಯಶಸ್ವಿಯಾಗಿ ಮರು ಜೋಡಿಸಿರುವುದು ಈ ವಯಸ್ಸಿನ ಮಗುವಿನಲ್ಲಿ ಪ್ರಥಮವಾಗಿದೆ. ಶಸ್ತ್ರ ಚಿಕಿತ್ಸೆ ನಡೆದು ಏಳು ತಿಂಗಳು ಕಳೆದಿದ್ದು, ಮಗು ಈಗ ನಡೆಯಲು ಶಕ್ತವಾಗಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications