ಸಂತರ ಸಮ್ಮೇಳನದಲ್ಲಿ ಮರು ಮತಾಂತರಕ್ಕೆ ಚಾಲನೆ
ಮಂಗಳೂರು, ಡಿ. 27: ಮುಂದಿನ ವರ್ಷ ದಕ್ಷಿಣ ಕನ್ನಡದಲ್ಲಿ ವಿಶ್ವ ಸಾಧು ಸಂತರ ಸಮ್ಮೇಳನ ಆಯೋಜಿಸಲಾಗಿದೆ. ಅದೇ ಸಂದರ್ಭ ಮರು ಮತಾಂತರಕ್ಕೆ ಜಿಲ್ಲೆಯಿಂದಲೇ ಅಧಿಕೃತ ಚಾಲನೆ ನೀಡಲಾಗುವುದು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ವಕ್ತಾರ ಧರ್ಮೇಂದ್ರ ಕೆ. ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಮಹಾಸಭಾ ವತಿಯಿಂದ ಈಗಾಗಲೇ 150 ಮಂದಿಯನ್ನು ಮರು ಮತಾಂತರಕ್ಕಾಗಿ ಗುರುತಿಸಲಾಗಿದೆ. ಹಿಂದೂ ಮಹಾಸಭಾ ಹಿಂದಿನಿಂದಲೂ ಈ ಕೆಲಸ ಮಾಡುತ್ತಿದೆ. ಐದು ವರ್ಷಗಳ ಹಿಂದೆ 40 ಮಂದಿಯನ್ನು ಮರು ಮತಾಂತರ ಮಾಡಲಾಗಿದೆ ಎಂದು ತಿಳಿಸಿದರು. [ಮರು ಮತಾಂತರಕ್ಕೆ ಕರೆದರೆ ಸ್ಪಂದಿಸುತ್ತೇನೆ]
ಮರು ಮತಾಂತರಗೊಂಡವರು ಯಾವುದೇ ಜಾತಿಯೊಂದಿಗೆ ಗುರುತಿಸಿಕೊಳ್ಳುವ ಅಗತ್ಯವಿಲ್ಲ. ಆದರೆ, ಅವರು ಯಾವುದೇ ಜಾತಿಗೆ ಸೇರಲು ಇಚ್ಛಿಸಿದರೆ ಆ ಜಾತಿಯ ದೀಕ್ಷೆಯನ್ನೂ ನೀಡಲಾಗುವುದು ಎಂದು ತಿಳಿಸಿದರು.

ಗೋಡ್ಸೆ ಮೂರ್ತಿ, ಮಂದಿರ : ಹಿಂದೂ ಮಹಾಸಭಾದ ಕೇಂದ್ರ ಸಮಿತಿ ವತಿಯಿಂದ ಉತ್ತರ ಪ್ರದೇಶದಲ್ಲಿ ನಾಥೂರಾಮ್ ಗೋಡ್ಸೆ ಮೂರ್ತಿ ಪ್ರತಿಷ್ಠಾಪಿಸಿ, ಮಂದಿರ ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರ ಗೋಡ್ಸೆಯನ್ನು ರಾಷ್ಟ್ರೀಯ ವ್ಯಕ್ತಿ ಎಂದು ಘೋಷಿಸಬೇಕೆಂದು ಅವರು ಆಗ್ರಹಿಸಿದರು. [ಸಂಘ ಪರಿವಾರದಿಂದ ಉಡುಪಿಯಲ್ಲಿ ಘರ್ ವಾಪಸಿ]
ಹಿಂದೂ ಮಹಾಸಭಾ ನಿಷೇಧಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೀಡಿರುವ ಹೇಳಿಕೆಯನ್ನು ಧರ್ಮೇಂದ್ರ ಕೆ. ಖಂಡಿಸಿದರು.
ಮಠ ವಿಧೇಯಕ ವಾಪಸ್ ಪಡೆಯಲಿ : ರಾಜ್ಯ ಸರ್ಕಾರ ಮಠ ಮಂದಿರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮಂಡಿಸಿರುವ ವಿಧೇಯಕವನ್ನು ವಾಪಾಸ್ ಪಡೆಯಬೇಕು. ಸಚಿವ ಆಂಜನೇಯ ಸ್ವಾಮಿ ಅವರನ್ನು ಕಾಂಗ್ರೆಸ್ನಿಂದ ಉಚ್ಛಾಟಿಸಬೇಕು. ಗೋ ಹತ್ಯೆ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. [ಮರು ಮತಾಂತರಕ್ಕೂ ಕರ್ನಾಟಕಕ್ಕೂ ಇದೆ ಲಿಂಕ್]
ಹಿಂದೂ ಮಹಾಸಭಾ ಜಿಲ್ಲಾಧ್ಯಕ್ಷ ಶ್ರವಣ್ ಕುಮಾರ್, ಉಪಾಧ್ಯಕ್ಷ ಮಂಜುನಾಥ ಹೊಸಬೆಟ್ಟು, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ನೀರುಮಾರ್ಗ, ಕಾರ್ಯಾಧ್ಯಕ್ಷ ಚೇತನ್ ಮಲ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications