ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ನಮ್ಮವನಲ್ಲ: ಎಬಿವಿಪಿ ಸ್ಪಷ್ಟನೆ

ಮಂಗಳೂರು, ಫೆಬ್ರವರಿ 24: ಸುಳ್ಯದಲ್ಲಿ ಇತ್ತೀಚೆಗೆ ನಡೆದ ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಕೊಲೆ ಪ್ರಕರಣವನ್ನು ಕೆಲವರು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. "ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ತಮ್ಮ ಕಾರ್ಯಕರ್ತನಲ್ಲ ಎಂದು ಎಬಿವಿಪಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.

ಈ ಕುರಿತು ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಬಿವಿಪಿ ವೃತ್ತಿ ಶಿಕ್ಷಣ ಪ್ರಮುಖ ನಿಕೇಶ್ ಉಬರಡ್ಕ, "ಘಟನೆ ಬಳಿಕ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಕಾರ್ತಿಕ್ ಎಬಿವಿಪಿ ಕಾರ್ಯಕರ್ತ ಎಂದು ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ," ಎಂದು ಹೇಳಿದರು.

Akshata's murder accused not belongs to us: ABVP

ಅಕ್ಷತಾಳ ಕೊಲೆ ಮಾಡಿರುವ ಕಾರ್ತಿಕ್‍ ನದ್ದು ನೀಚ ಕೃತ್ಯ ಎಂದು ಕಿಡಿಕಾರಿದ ಅವರು, "ಅಕ್ಷತಾಳ ಬರ್ಬರ ಹತ್ಯೆ ವಿದ್ಯಾರ್ಥಿ ಸಮೂಹದಲ್ಲಿ ಆತಂಕ ಸೃಷ್ಟಿಸಿದೆ," ಎಂದು ತಿಳಿಸಿದರು .

Akshata's murder accused not belongs to us: ABVP

"ಘಟನೆ ಬಳಿಕ ಎಬಿವಿಪಿ ಕಾರ್ಯಕರ್ತರು ಆಸ್ಪತೆಗೆ ತೆರಳಿ ಆಕೆಯ ಶವದ ಮಹಜರು ವೇಳೆ ಸಾಕ್ಷಿ ಕೂಡ ನೀಡಿದ್ದಾರೆ," ಎಂದು ಹೇಳಿದ ಅವರು ಈ ಪ್ರಕರಣದಲ್ಲಿ ಪೊಲೀಸರ ತನಿಖೆಗೂ ಎಬಿವಿಪಿ ಸಹಕಾರ ನೀಡಲಿದೆ ಎಂದು ತಿಳಿಸಿದರು.

Akshata's murder accused not belongs to us: ABVP

ಅಕ್ಷತಾಳನ್ನು ಕೊಲೆಗೈದ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಅವರು, "ಅಕ್ಷತಾಳನ್ನು ಕೊಲೆಗೈದ ಕಾರ್ತಿಕ್ ಇದುವರೆಗೆ ಎಬಿವಿಪಿಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಅಭ್ಯಾಸ ವರ್ಗದಲ್ಲೂ ಭಾಗಿಯಾಗಿಲ್ಲ. ಯಾವುದೇ ಜವಾಬ್ದಾರಿ ಹೊಂದಿಲ್ಲ. ಆದರೂ ಕೆಲವರು ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಪತ್ರಿಕೆಗಳಲ್ಲಿ ಬಾಯಿಗೆ ಬಂದಂತೆ ಹೇಳಿಕೆ ನೀಡಿ ರಾಜಕೀಯ ಮಾಡುತ್ತಿರುವುದು ಖಂಡನೀಯ." ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+