ಮಂಗಳೂರು: ಯುವಕನನ್ನು ಮೃತ್ಯುವಿನಿಂದ ಪಾರು ಮಾಡಿದ ಜೆಕ್ಲೆನ್ ಡಿಸೋಜಾ
ಮಂಗಳೂರು, ಆಗಸ್ಟ್ 02: ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಭರ್ಜರಿಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಕಿಂಡಿ ಅಣೆಕಟ್ಟುಗಳು ತುಂಬಿ ತುಳುಕುತ್ತಿವೆ. ಅಣೆಕಟ್ಟುಗಳಲ್ಲಿ ಸಂಗ್ರಹವಾದ ಜಲರಾಶಿಯನ್ನು ಕಣ್ತುಂಬಿಕೊಳ್ಳಲು ಜನರು ಡ್ಯಾಮ್ ಗಳಿಗೆ ಭೇಟಿ ನೀಡುತ್ತಿದ್ದಾರೆ.
ಹೀಗೆ ಕಿರು ಕಿಂಡಿ ಅಣೆಕಟ್ಟು ನೋಡಲು ತೆರಳಿದ್ದ ಯುವಕನೊಬ್ಬನ ಹುಚ್ಚು ಸಾಹಸಕ್ಕೆ ಮೃತ್ಯು ಆಹ್ವಾನ ನೀಡಿತ್ತಾದರೂ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಚಾವಾಗಿದ್ದಾನೆ. ಮಂಗಳೂರು ಹೊರವಲಯದ ಮರವೂರು ಎಂಬಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಸಂಜೆ ಕುಡಿತದ ಅಮಲಿನಲ್ಲಿ ಹುಚ್ಚು ಸಾಹಸಕ್ಕೆ ಕೈಹಾಕಿದ ಯುವಕನ ಕಥೆಯಿದು.
ಬುಧವಾರ ಸಂಜೆ ಇಲ್ಲಿನ ಸ್ಥಳೀಯ ನಿವಾಸಿ ಶರತ್ ಕುಡಿತದ ಅಮಲಿನಲ್ಲಿ ಹತ್ತಿರದಲ್ಲೇ ಇರುವ ಮರವೂರು ಕಿರು ಡ್ಯಾಮ್ ವೀಕ್ಷಿಸಲು ಹೋಗಿದ್ದರು. ಡ್ಯಾಮ್ ನಲ್ಲಿ ಸಂಗ್ರಹವಾದ ಜಲರಾಶಿಯನ್ನು ಕಂಡು ಉತ್ತೇಜಿತನಾದ ಶರತ್ ಹುಚ್ಚು ಸಾಹಸಕ್ಕೆ ಕೈಹಾಕಿ ಡ್ಯಾಮ್ ನಲ್ಲಿ ಈಜಲು ನೀರಿಗೆ ಹಾರಿದ್ದಾನೆ.

ನೋಡನೋಡುತ್ತಿದ್ದಂತೆ ಶರತ್ ಕಿಂಡಿ ಅಣೆ ಕಟ್ಟಿನ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗುವ ಅಪಾಯಕ್ಕೆ ಸಿಲುಕಿದ್ದಾನೆ. ಇದನ್ನು ಕಂಡ ಸ್ಥಳೀಯ ಯುವಕರು ಶರತ್ ನ ರಕ್ಷಣೆಗಾಗಿ ಟ್ಯೂಬ್ ಹಾಗೂ ಹಗ್ಗದ ಮೂಲಕ ಮೇಲೆತ್ತುವ ಪ್ರಯತ್ನಕ್ಕೆ ಮುಂದಾಗಿದ್ದರು. ಆದರೆ ಕುಡಿತದ ಅಮಲಿನಲ್ಲಿದ್ದ ಶರತ್ ನ ರಕ್ಷಣೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯ ಯುವಕ ಜೆಕ್ಲಿನ್ ಡಿಸೋಜಾ ನೀರಿಗೆ ಧುಮುಕಿ ಅಪಾಯದಲ್ಲಿದ್ದ ಶರತ್ ನನ್ನು ರಕ್ಷಿಸಿದ್ದಾನೆ.
ಇದೀಗ ಶರತ್ ರಕ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕ ಜೆಕ್ಲೆನ್ ಡಿಸೋಜಾ ರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications