ಸಂಪುಟ ನರಸಿಂಹ ಮಠದ ವಿರುದ್ಧ ಕೇಳಿಬಂತು ಮತ್ತೊಂದು ಆರೋಪ
ಮಂಗಳೂರು, ನವೆಂಬರ್. 30:ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವಾಲಯ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜಾ ವಿಧಿ ವಿಧಾನದಿಂದ ಆರಂಭಗೊಂಡಿದ್ದ ಈ ವಿವಾದ ನಂತರ ದೇವಾಲಯದ ಫೋಟೋ, ಉತ್ಸವ ಮೂರ್ತಿ ಸೇರಿದಂತೆ ಇನ್ನಿತರ ಫೋಟೋಗಳನ್ನು ಸಂಪುಟ ನರಸಿಂಹ ಮಠದ ವೆಬ್ ಸೈಟ್ ನಲ್ಲಿ ಅಕ್ರಮವಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ದೇವಾಲಯದ ಆಡಳಿತ ಮಂಡಳಿ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.
ಇದೀಗ ಮಠದ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದ ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಿದ ಆರೋಪ ಇದೀಗ ಮಠದ ಮೇಲಿದೆ.

ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದ ವಿಸ್ತೀರ್ಣ 1.33 ಎಕರೆಯಾಗಿದ್ದು, ಸುಬ್ರಹ್ಮಣ್ಯ ಗ್ರಾಮದ ಸರ್ವೆ ನಂಬರ್ 82/1 ರಲ್ಲಿ ಈ ಭೂಮಿಯಿದೆ. ದಾಖಲೆ ಪ್ರಕಾರ ಕಲಂ 9 ರಲ್ಲಿ ಸ್ವಾಧೀನದ ಹೆಸರು ಸರಕಾರ ಎಂದಿದ್ದು, ಕಲಂ 11 ರಲ್ಲಿ ಪೋರಂ ದೇವಸ್ಥಾನ ಎಂದಿದೆ.
ಆದರೆ ಇದೀಗ ಮಠದ ವತಿಯಿಂದ ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ರಿಟ್ ಪಿಟಿಷನ್ ನಲ್ಲಿ ಈ ದಾಖಲೆಯನ್ನು ತಿದ್ದಿರುವ ಅಂಶ ದೇವಸ್ಥಾನದ ಗಮನಕ್ಕೆ ಬಂದಿದೆ.

ದೇವಸ್ಥಾನದ ಒಳಾಂಗಣದಲ್ಲಿರುವ ಈ ಜಾಗವನ್ನು ಇದೀಗ ಸುಬ್ರಾಯ ದೇವಸ್ಥಾನ, ನರಸಿಂಹ ಮಠ, ಉಮಾಮಹೇಶ್ವರಿ, ಕಾಳಿ ಹೀಗೆ ವಿಂಗಡಿಸಿ ಬದಲಾಯಿಸಲಾಗಿದೆ. ಸುಳ್ಯ ತಹಶೀಲ್ದಾರ್ ಮೂಲಕವೇ ಈ ತಿದ್ದುಪಡಿ ನಡೆದಿದ್ದು, ಜಾಗದ ವಾರಸುದಾರರಾದ ಸುಬ್ರಹ್ಮಣ್ಯ ದೇವಸ್ಥಾನದ ಗಮನಕ್ಕೆ ತರದೇ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದ ಆರೋಪಿಸಲಾಗಿದೆ.
ಈ ಸಂಬಂಧ ಸಂಪುಟ ನರಸಿಂಹ ಮಠದ ವಿರುದ್ಧ ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಿದ ಆರೋಪವನ್ನು ಹೊರಿಸಲಾಗಿದೆ. ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧಾರ್ಮಿಕ ದತ್ತಿ ಇಲಾಖೆಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications