ಜುಲೈ 6ರಿಂದ ಮೂಡುಬಿದರೆಯಲ್ಲಿ ಬೃಹತ್ ಉದ್ಯೋಗ ಮೇಳ
ಮಂಗಳೂರು, ಜುಲೈ. 04 : ಶಿಕ್ಷಣ ಕಾಶಿ ಎಂದೇ ಗುರುತಿಸಲ್ಪಡುವ ಮೂಡುಬಿದರೆ, ಈಗ ಉದ್ಯೋಗ ಆಕಾಂಕ್ಷಿಗಳನ್ನು ಕೈಬೀಸಿ ಕರೆಯುತ್ತಿದ್ದು, ಇಲ್ಲಿಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಬೃಹತ್ ಉದ್ಯೋಗಮೇಳ ಆಯೋಜಿಸಲಾಗುತ್ತಿದೆ.
ಜುಲೈ 6 ಮತ್ತು 7ರಂದು ಆಳ್ವಾಸ್ ನ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ 2018 ಆಯೋಜಿಸಲಾಗಿದ್ದು, ಉದ್ಯೋಗ ಆಕಾಂಕ್ಷಿಗಳನ್ನು ಆಕರ್ಷಿಸುತ್ತಿದೆ.
ಆಳ್ವಾಸ್ ಸಂಸ್ಥೆಯ 10ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಇದಾಗಿದ್ದು, ಈ ಮೇಳ 2 ದಿನಗಳ ಕಾಲ ನಡೆಯಲಿದೆ. ಜುಲೈ 6ರಂದು ಮೊದಲ ಸುತ್ತು ಹಾಗೂ 7ರಂದು ಕೊನೆಯ ಸುತ್ತಿನ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ.

ಗ್ರಾಮೀಣ ಭಾಗದ ಉದ್ಯೋಗ ಆಕಾಂಕ್ಷಿಗಳಿಗಾಗಿಯೇ ಈ ಮೇಳ ಅಯೋಜಿಸಲಾಗಿದೆ. ಕಳೆದ 9 ವರ್ಷಗಳಿಂದ ಗ್ರಾಮೀಣ ಸ್ಥರದ ಉದ್ಯೋಗಾಸಕ್ತರನ್ನೂ ಈ ಮೇಳ ತಲುಪಿದೆ. ಹೆಚ್ಚಾಗಿ ನಗರ ಪ್ರದೇಶದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದೆ.
ಈ ಬಾರಿಯ ಆಳ್ವಾಸ್ ಪ್ರಗತಿ 2018ರ ಆವೃತ್ತಿಯಲ್ಲಿ ಪದವಿ, ವೈದ್ಯಕೀಯ, ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ಆರ್ಟ್ಸ್, ಕಾಮರ್ಸ್, ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲಮೊ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ, ವಿದ್ಯಾರ್ಹತೆಯುಳ್ಳ ಪ್ರತಿಭಾವಂತರಿಗೆ ಅವಕಾಶಗಳು ಒದಗಿ ಬರಲಿದೆ.
ಮ್ಯಾನುಫ್ಯಾಕ್ಚರಿಂಗ್ , ಹೆಲ್ತ್ ಕೇರ್, ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೊಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್ಜಿಒಗಳನ್ನು ಪ್ರತಿನಿಧಿಸುವ ಉನ್ನತ ನೇಮಕಾತಿ ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ.

ನೋಂದಣಿ ಪ್ರಕ್ರಿಯೆ ಮುಕ್ತವಾಗಿದ್ದು, ಜುಲೈ 6ರವರೆಗೆ ಮಾತ್ರ ಲಭ್ಯವಿರುತ್ತದೆ. ಉತ್ಪಾದನಾ ವಲಯದ ಕಿರ್ಲೋಸ್ಕರ್, ಟೊಯೊಟೊ , ಟೆಕ್ಸ್ ಟೈಲ್ ಮೆಷಿನರಿ, ಟೊಯೊಟೊ ಇಂಡಸ್ಟ್ರೀಸ್ , ಎಂಜಿನ್ ಇಂಡಿಯಾ, ಅಜೆಕ್ಸ್ ಫಿಯೋರಿ, ತೊಷಿಬಾ, ಮಿಟ್ಸುಬಿಸಿ- ಎಲೆಕ್ಟ್ರಿಕ್ ಇಂಡಸ್ಟ್ರಿಯಲ್ ಸಿಸ್ಟಮ್ಸ್ ಕಾರ್ಪೋರೇಷನ್ , ಅಲ್ ಕಾರ್ಗೊ ಲಾಜಿಸ್ಟಿಕ್ , ಇಂಡೊ ಯೆಸ್ ಎಂಐಎಂ ಟೆಕ್, ಕೆನೀಸ್ ಟೆಕ್ನಾಲಜಿಸ್ ಗಳಲ್ಲಿ ಬಿಇ ಮೆಕ್ಯಾನಿಕಲ್, ಡಿಪ್ಲೊಮಾ, ಐಟಿಐ ಪದವೀಧರರಿಗೆ ಹೆಚ್ಚು ಅವಕಾಶಗಳು ಒದಗಿ ಬರಲಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಪಾಸ್ಪೋರ್ಟ್ ಅಳತೆಯ 5 ರಿಂದ 10 ಫೋಟೊ, ರೆಸ್ಯೂಮ್, ದೃಢೀಕರಿಸಿದ ಎಲ್ಲ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಆನ್ಲೈನ್ ನೋಂದಣಿಯ ಐಡಿಯೊಂದಿಗೆ ಹಾಜರಾಗಬೇಕು ಎಂದು ಕೋರಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications