ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಳದ್ದು ಅಸ್ವಾಭಾವಿಕ ಸಾವು: ಉಗ್ರಪ್ಪ
ಮಂಗಳೂರು, ಆಗಸ್ಟ್ 01 : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪುಜಾರಿ ಆತ್ಮಹತ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆದು ಕೊಳ್ಳುತ್ತಿದೆ. ಇಂದು (ಮಂಳವಾರ) ಮಹಿಳಾ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್ ಉಗ್ರಪ್ಪ ಮುಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ವಿರುದ್ದ ಕಿಡಿಕಾರಿದರು.
ನಂತರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಧಿಕಾರಿಗಳ ಸಭೆ ನಡೆಸಿದ ಅವರು, "ಆಳ್ವಾಸ್ ಶಿಕ್ಷಣ ಸಂಸ್ಥೆ ಭೇಟಿ ವೇಳೆ ನನಗೆ ಆಘಾತಕಾರಿ ಮಾಹಿತಿಗಳು ಲಭ್ಯವಾಗಿವೆ. ಮಾಹಿತಿಗಳ ಪ್ರಕಾರ ಕಾವ್ಯಳದ್ದು ಅಸ್ವಾಭವಿಕ ಸಾವು ಅಂತ ಕಾಣುತ್ತದೆ. ಆದರೆ, ಇದರಲ್ಲಿ ಆಡಳಿತ ಮಂಡಳಿ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಈ ಸಂಸ್ಥೆಗೆ ವಸತಿ ಶಾಲೆ ನಡೆಸುವ ಯಾವುದೇ ಅನುಮತಿಯಿಲ್ಲ, ಇಲ್ಲಿ ನಡೆಯುತ್ತಿರುವ ಹಾಸ್ಟೆಲ್ ಗಳು ಕಾನೂನಿನ ಚೌಕಟ್ಟು ಮೀರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಹಾಸ್ಟೆಲ್ ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದ ಅವರು, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕನಿಷ್ಠ ವೇತನ ಕೂಡ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಸಂಬಂಧ ಪಟ್ಟ ಪೋಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದೇನೆ ಈ ಅಸ್ವಾಭವಿಕ ಸಾವಿನಲ್ಲಿ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೆನೆ ಎಂದು ಹೇಳಿದರು.
ಪ್ರಕರಣದ ಕುರಿತು ಜಿಲ್ಲಾಡಳಿತ 3 ವಾರದೊಳಗೆ ಸಮಿತಿಗೆ ವರದಿ ನೀಡುವಂತೆ ಅವರು ಸೂಚನೆ ನೀಡಿದರು. ಕಾವ್ಯ ಪ್ರಕರಣದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ ಉಗ್ರಪ್ಪ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆಳ್ವಾಸ್ ಸಂಸ್ಥೆಯ ಲೋಪದಿಂದ ಕಾವ್ಯ ಸಾವಾಗಿದೆ. ಈ ಹಿನ್ನೆಲೆಯಲ್ಲಿ ಕಾವ್ಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಸೂಚನೆ ನೀಡಿದರು.

ಉಗ್ರಪ್ಪರ ಉಗ್ರ ಪ್ರತಾಪಕ್ಕೆ ಕುಸ್ತು ಬಿದ್ದ ಅಧಿಕಾರಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಗ್ರಪ್ಪ ಅವರ ವಾಗ್ದಾಳಿಗೆ ಬೆದರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ವರ್ಷದ ಹಿಂದೆ ಕೂಡಾ ಉಗ್ರಪ್ಪರ ಉಗ್ರವತಾರಕ್ಕೆ ಇದೇ ಅಧಿಕಾರಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.
ಡಾ. ಮೋಹನ್ ಆಳ್ವಾ ವಿಚಾರಣೆ: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣದ ಕುರಿತು ಮಹಿಳಾ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಆಳ್ವಾಸ್ ಶಿಕ್ಷಣ ಸಂಸ್ಥೆ ಅದ್ಯಕ್ಷ ಡಾ. ಮೋಹನ್ ಆಳ್ವಾ ಅವರ ವಿಚಾರಣೆ ನಡೆಸಿದೆ.
ಆಳ್ವಾರಿಂದ ಪ್ರಕರಣದ ಕುರಿತು ತನಿಖಾ ಸಮಿತಿ ವಿವರವಾಗಿ ಹೇಳಿಕೆ ಪಡೆದು ಕೊಂಡಿದೆ ಎಂದು ತಿಳಿದು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications