ಭಾನುವಾರ ಮಂಗಳೂರಿಗೆ ಅಮಿತ್ ಶಾ, ಕಾರ್ಯಕ್ರಮಗಳು
ಮಂಗಳೂರು, ಆಗಸ್ಟ್ 20 : ಉಳ್ಳಾಲದ ವೀರರಾಣಿ ಅಬ್ಬಕ್ಕನ ನಾಡಿಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆ.21ರ ಭಾನುವಾರ ಭೇಟಿ ನೀಡಲಿದ್ದಾರೆ. '70ನೇ ಸ್ವಾತಂತ್ರ್ಯೊತ್ಸವ ಬಲಿದಾನ ಸ್ಮರಣೆ' ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದು, ಸುಮಾರು 5 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಭಾನುವಾರ ಬೆಳಗ್ಗೆ 11.30ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ 'ತಿರಂಗಾ ಯಾತ್ರೆ ಬೃಹತ್ ಸಾರ್ವಜನಿಕ ಸಭೆ' ನಡೆಯಲಿದೆ. ವಿವಿಯ ಮಂಗಳಾ ಸಭಾಂಗಣವನ್ನು ಇದಕ್ಕಾಗಿ ಸಜ್ಜುಗೊಳಿಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಕಾರಣ ಸಭಾಂಗಣದ ಮುಂಭಾಗ ಬೃಹತ್ ಚಪ್ಪರ ನಿರ್ಮಿಸಲಾಗಿದೆ.[ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಳ್ಳಾಲಕ್ಕೆ]

ಮಂಗಳಾ ಸಭಾಂಗಣದ ಒಳಗೆ ಸುಮಾರು ಒಂದೂವರೆ ಸಾವಿರ ಮಂದಿ ಕುಳಿತುಕೊಳ್ಳಬಹುದು. ಉಳಿದ ಜನರಿಗೆ ಅನುಕೂಲವಾಗುವಂತೆ ಸಭಾಂಗಣ ಮುಂಭಾಗದಲ್ಲಿ ಚಪ್ಪರ ಹಾಕಲಾಗುತ್ತಿದ್ದು, ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ 3 ಎಲ್ಇಡಿ ಪರದೆಯನ್ನು ಅಳವಡಿಸಲಾಗುತ್ತಿದೆ.[ಚಿತ್ರಗಳು : ಕರ್ನಾಟಕದಲ್ಲಿ ಬಿಜೆಪಿಯ ತಿರಂಗ ಯಾತ್ರೆ]
ಅಮಿತ್ ಶಾ ಅವರ ಜೊತೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಮಿತ್ ಶಾ ಕಾರ್ಯಕ್ರಮಗಳು
* ಬೆಳಗ್ಗೆ 10 ಗಂಟೆಗೆ ಬಿಜೆಪಿ ಕಚೇರಿ ಮುಂಭಾಗ 'ಗಿಡ ನೆಡಿ ಪರಿಸರ ಉಳಿಸಿ' ಕಾರ್ಯಕ್ರಮ
* 10.20ಕ್ಕೆ ಪಂಪ್ವೆಲ್ ವೃತ್ತದಲ್ಲಿ ತಿರಂಗಾ ಯಾತ್ರೆ ಬೃಹತ್ ಜಾಥಾ ಉದ್ಘಾಟನೆ
* ಬೆಳಗ್ಗೆ 11ಕ್ಕೆ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ
* 11.30ಕ್ಕೆ ತಿರಂಗಾ ಯಾತ್ರೆ ಬೃಹತ್ ಸಾರ್ವಜನಿಕ ಸಭೆ
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications