ಮಂಗಳೂರು ಪಶ್ಚಿಮ ವಲಯದ ಡಿಐಜಿಪಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ: ಡ್ರಗ್ ಪೆಡ್ಲರ್ಸ್ಗೆ ಖಡಕ್ ವಾರ್ನಿಂಗ್
ಮಂಗಳೂರು, ಜನವರಿ 02: ಡಗ್ಸ್, ಕೋಮುವಾದದ ರೀತಿಯಂತಹ ಕಾನೂನು ಬಾಹಿರ ಕೃತ್ಯಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ವಹಿಸಲಾಗುತ್ತದೆ ಎಂದು ಪಶ್ಚಿಮ ವಲಯ ನೂತನ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿಪಿ) ಅಮಿತ್ ಸಿಂಗ್ ಹೇಳಿದ್ದಾರೆ.
ನೂತನ ಡಿಐಜಿಪಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸದ್ಯ ಅಪರಾಧ ಕೃತ್ಯದ ಸ್ವರೂಪವೇ ಬದಲಾಗಿದೆ. ಕಳವಿಗಿಂತಲೂ ಡ್ರಗ್ಸ್, ಆರ್ಥಿಕ ಅಪರಾಧ, ಸೈಬರ್ ಅಪರಾಧದಂತಹ 'ವೈಟ್ ಕಾಲರ್ ಅಪರಾಧಗಳು ಅಧಿಕವಾಗುತ್ತಿದೆ. ಇಂತಹ ಕೃತ್ಯಗಳನ್ನು ಬೇಧಿಸುವುದೇ ಪೊಲೀಸರಿಗೆ ಸವಾಲಿನ ಸಂಗತಿ.

ಹತ್ತು ವರ್ಷಗಳ ಹಿಂದಿನ ಅಪರಾಧಕ್ಕೂ ಈಗಿನ ಅಪರಾಧಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಕೋಮುವಾದದಂತಹ ಕೃತ್ಯಗಳಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದ ವಿರುದ್ಧವೂ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಸೈಬರ್ ಅಪರಾಧಗಳ ಬಗ್ಗೆ ಜನತೆ ಸಾಕಷ್ಟು ಜಾಗರೂಕರಾಗಬೇಕು ಎಂದರು.
2007ನೇ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿರುವ ಅಮಿತ್ ಸಿಂಗ್ ಅವರು 2009-2011 ವರೆಗೆ ಎಎಸ್ಪಿಯಾಗಿ ಮಂಗಳೂರು ಹಾಗೂ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸಿದ್ದರು. 2011ರಿಂದ ಹಾಸನ, ಕಲಬುರಗಿ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ನಾಲ್ಕು ವರ್ಷಗಳಲ್ಲಿ ಎನ್ಐಎಯಲ್ಲಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಪಶ್ಚಿಮ ವಲಯ ನೂತನ ಉಪ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
ಹೊಸ ವರ್ಷದ ಪಾರ್ಟಿ ನಶೆ - ಸ್ನೇಹಿತನ ಮೂಗನ್ನೇ ಕಚ್ಚಿ ತುಂಡರಿಸಿದ ಯುವಕ
ಹೊಸ ವರ್ಷದ ಪಾರ್ಟಿಯ ನಶೆಯಲ್ಲಿ ಮುಳುಗಿದ್ದ ಯುವಕರಿಬ್ಬರ ನಡುವೆ ಗಲಾಟೆಯಲ್ಲಿ ಯುವಕನೊಬ್ಬ ಸ್ನೇಹಿತನ ಮೂಗನ್ನೇ ಕಚ್ಚಿ ತುಂಡರಿಸಿದ ವಿಚಿತ್ರ ಘಟನೆಯೊಂದು ಬೆಳ್ತಂಗಡಿಯ ಪಿಲ್ಯದಲ್ಲಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28) ಎಂಬ ಯುವಕನ ಮೂಗಿಗೆ ಹಾನಿಯಾಗಿದೆ. ಮೂಡಿಗೆರೆ ಮೂಲದ ರಾಕೇಶ್ ಮೂಗು ತುಂಡರಿಸಿದ ಆರೋಪಿ ಎನ್ನಲಾಗಿದೆ.
ಆರೋಪಿ ರಾಕೇಶ್ ಬೆಳ್ತಂಗಡಿಯ ಮಳಿಗೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ದೀಕ್ಷಿತ್ ಹಾಗೂ ರಾಕೇಶ್ ಇಬ್ಬರು ಸ್ನೇಹಿತರಾಗಿದ್ದರು. ಇವರಿಬ್ಬರು ಹೊಸ ವರ್ಷಾಚರಣೆ ನೆಪದಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ರಾಕೇಶ್ ಸ್ನೇಹಿತ ದೀಕ್ಷಿತ್ ಮೂಗನ್ನೇ ಕಚ್ಚಿ ತುಂಡರಿಸಿದ್ದಾನೆ. ತಕ್ಷಣ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications