ವಿವಾದಕ್ಕೆ ಗುರಿಯಾದ 'ಅಮ್ಮನೆಡೆಗೆ ನಮ್ಮ ನಡಿಗೆ' ಕಾರ್ಯಕ್ರಮ
ಮಂಗಳೂರು, ಫೆಬ್ರವರಿ 04: ಶಕ್ತಿ ಸ್ವರೂಪಿಣಿ ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಂಗಳೂರಿನಿಂದ ಪ್ರತಿವರ್ಷವೂ 'ಅಮ್ಮನೆಡೆಗೆ ನಮ್ಮ ನಡಿಗೆ' ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಪ್ರತಿವರ್ಷ ಈ 20 ಕಿ.ಮೀ. ನಡಿಗೆಯಲ್ಲಿ ಸಾವಿರಾರು ಜನ ಪಾಲ್ಗೊಳ್ಳುತ್ತಾರೆ. ಜಾತಿ, ಪಕ್ಷಗಳ ಎಲ್ಲೆ ಮೀರಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆಯ ದೇವಿಯ ಆರಾಧಕರು ಈ ನಡಿಗೆಯಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದವನ್ನು ಪಡೆಯುತ್ತಾರೆ.
ಮೋದಿ ಹೆಸರು ಉಲ್ಲೇಖಿಸಿದ ಯಕ್ಷಗಾನ ಪಾತ್ರಧಾರಿ ವಿರುದ್ಧ ಕಾಂಗ್ರೆಸ್ ಕೆಂಗಣ್ಣು
ನಿನ್ನೆ ಭಾನುವಾರ (ಫೆಬ್ರವರಿ 3 ರಂದು) ಈ ಬಾರಿಯ 'ಅಮ್ಮನೆಡೆಗೆ ನಮ್ಮ ನಡಿಗೆ' ಪಾದಯಾತ್ರೆ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಧಾರ್ಮಿಕ ಕಾರ್ಯಕ್ರಮ ವಿವಾದಕ್ಕೆ ಗುರಿಯಾಗಿದೆ.
ಹೌದು, ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಈ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. 'ಅಮ್ಮನೆಡೆಗೆ ನಮ್ಮ ನಡಿಗೆ' ಪಾದಯಾತ್ರೆ ಕಾರ್ಯಕ್ರಮವಲ್ಲ, ಬದಲಿಗೆ ಬಿಜೆಪಿ ಪಕ್ಷದ ಪಾದಯಾತ್ರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಕಾರಣವೂ ಇದೆ. ಜಿಲ್ಲೆಯ ಬಹುತೇಕ ಎಲ್ಲಾ ಬಿಜೆಪಿ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಆರೋಪಕ್ಕೆ ಕಾರಣವಾಗಿದೆ.
ಇದೆಂಥ ವಿಪರ್ಯಾಸ! ಹೆಗಡೆಗೆ ಪಾಠ ಕಲಿಸೋಕೆ ಪತ್ನಿಯನ್ನು ಎಳೆದುತರೋದಾ?!
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಧಾರ್ಮಿಕ ಕಾರ್ಯಕ್ರಮವನ್ನು ಅತ್ಯಂತ ಚಾಣಕ್ಷತನದಿಂದ ಬಳಸಿಕೊಳ್ಳಲಾಗಿದೆ ಎಂದು ದೂರಲಾಗುತ್ತಿದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲಾ ಬಿಜೆಪಿ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
'ಹಿಂದು ಯುವತಿಯನ್ನು ಮುಟ್ಟಿದರೆ...' ಅನಂತ್ ಹೊಸ ವಿವಾದ!
ಪಾದಯಾತ್ರೆಯ ಮಧ್ಯೆ ಮಧ್ಯೆ ನಡೆದಂತಹ ಕಾರ್ಯಕ್ರಮದಲ್ಲಿ ಬಿಜೆಪಿಯ ಆ ಮುಖಂಡ , ಬಿಜೆಪಿಯ ಈ ಮುಖಂಡ ಬಂದಿದ್ದಾರೆಂದು ಬಹುಪರಾಕ್ ಮಾಡಿದ್ದೇ ಮಾಡಿದ್ದು. ಇದನ್ನೆಲ್ಲಾ ಅತ್ಯಂತ ಸಮೀಪದಿಂದ ನೋಡಿದ ದೇವಿ ಭಕ್ತರಿಗೆ ಇದು ದೇವಿಯ ಕಾರ್ಯಕ್ರಮವೋ ಅಥವಾ ಬಿಜೆಪಿಯ ಪ್ರಚಾರ ಕಾರ್ಯಕ್ರಮವೋ ಎನ್ನುವ ಗೊಂದಲವೂ ಮೂಡಿಸಿತ್ತು.