ಗೋಗಳ್ಳತನ ವಿರುದ್ದ ಅಮರಣಾಂತ ಉಪವಾಸ, ರಾಜಾರಾಂ ಭಟ್ ಆಸ್ಪತ್ರೆಗೆ
ಮಂಗಳೂರು, ಏಪ್ರಿಲ್ 8: ಬಂಟ್ವಾಳದ ಕೈರಂಗಳದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಕಳೆದ 8 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಗೋಶಾಲೆಯ ಅಧ್ಯಕ್ಷ ಟಿ.ಜಿ.ರಾಜಾರಾಂ ಭಟ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶನಿವಾರ ತಡ ರಾತ್ರಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಒತ್ತಾಯ ಪೂರ್ವಕವಾಗಿ ಟಿ.ಜಿ. ರಾಜಾರಾಂ ಭಟ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇತ್ತೀಚೆಗೆ ಬಂಟ್ವಾಳದ ಅಮೃತಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನ ಖಂಡಿಸಿ ಹಾಗೂ ಗೋಗಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಟಿ.ಜಿ.ರಾಜಾರಾಂ ಭಟ್ ಕಳೆದ 8 ದಿನಗಳ ಹಿಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ರಾಜಾರಾಂ ಭಟ್ ಅವರ ಆರೋಗ್ಯ ತೀವ್ರವಾಗ ಹದಗೆಟ್ಟಿತ್ತು.

ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದ್ದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಅಂತ್ಯಗೊಳಿಸುವಂತೆ ರಾಜಾರಾಂ ಭಟ್ ಅವರ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ನಿರಶನ ಅಂತ್ಯಗೊಳಿಸಲು ರಾಜಾರಾಂ ಭಟ್ ನಿರಾಕರಿಸಿದ್ದರು.
ಈ ನಡುವೆ ನಿನ್ನೆ ತಡರಾತ್ರಿ ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ಹಿರಿಯ ಪೊಲೀಸ್ ಅಧಿಕಾರಗಳ ನೇತೃತ್ವದ ತಂಡ ರಾಜಾರಾಂ ಭಟ್ ಅವರನ್ನು ಏಕಾಏಕಿ ಒತ್ತಾಯ ಪೂರ್ವಕವಾಗಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.
ಈಗಾಗಲೇ ಪೊಲೀಸರು ಇಬ್ಬರು ದನಗಳ್ಳರನ್ನು ಬಂಧಿಸಿದ್ದಾರೆ. ಆದರೆ ನೈಜ ಗೋಕಳ್ಳರ ಬಂಧನ ಆಗುವವರೆಗೂ ಉಪವಾಸ ನಿರಶನ ಮುಂದುವರೆಸುವುದಾಗಿ ರಾಜಾರಾಂ ಭಟ್ ಪಟ್ಟು ಹಿಡಿದು ನಿರಶನ ಮುಂದುವರಿಸಿದ್ದರು.
ಭಟ್ ಬೆಂಬಲಿಗರಿಂದ ಗೋಶಾಲೆಯಲ್ಲಿ ನಿರಶನ ಮುಂದುವರೆದಿದ್ದು ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಈ ವಿಚಾರ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚಾರಿಸುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications