ಕಾನೂನು ಉಲ್ಲಂಘಿಸಿ ಕೋಣಗಳಿಗೆ ಹಿಂಸೆ: ಕಂಬಳ ಸಮಿತಿಗೆ ನೋಟಿಸ್ ಜಾರಿ
ನಿಷೇಧದ ತೂಗುಕತ್ತಿಯಲ್ಲಿರುವ ಕಂಬಳ ಮತ್ತೆ ನಿಷೇಧದ ಭೀತಿಯಲ್ಲಿದೆ. ಪೇಟಾ ಸಂಸ್ಥೆಗೆ ಕಂಬಳ ಈ ಬಾರಿ ಸುಲಭ ಆಹಾರವಾಗಿದ್ದು, ಓಟಗಾರರು ಕಂಬಳಕೋಣಗಳಿಗೆ ರಕ್ತ ಬರುವಂತೆ ಬಾರುಕೋಲಿನಿಂದ ಹೊಡೆದ ಫೋಟೋ/ವಿಡಿಯೋ ಪೇಟಾಗೆ ಲಭ್ಯವಾಗಿದೆ.
ಮಂಗಳೂರು, ಜನವರಿ 28: ನಿಷೇಧದ ತೂಗುಕತ್ತಿಯಲ್ಲಿರುವ ಕಂಬಳ ಮತ್ತೆ ನಿಷೇಧದ ಭೀತಿಯಲ್ಲಿದೆ. ಪೇಟಾ ಸಂಸ್ಥೆಗೆ ಕಂಬಳ ಈ ಬಾರಿ ಸುಲಭ ಆಹಾರವಾಗಿದ್ದು, ಓಟಗಾರರು ಕಂಬಳಕೋಣಗಳಿಗೆ ರಕ್ತ ಬರುವಂತೆ ಬಾರುಕೋಲಿನಿಂದ ಹೊಡೆದ ಫೋಟೋ/ವಿಡಿಯೋ ಪೇಟಾಗೆ ಲಭ್ಯವಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಬಲ ಆಧಾರ ಪೇಟಾ ಸಂಸ್ಥೆಗೆ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಗೆ ಕೋಣಗಳಿಗೆ ಹಿಂಸೆಯ ಕುರಿತು ನೋಟೀಸ್ ನೀಡಿದೆ.
ಕಂಬಳದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ಪಶುಪಾಲನಾ ಇಲಾಖೆ ನೋಟಿಸ್ ಜಾರಿ ಮಾಡಿರುವ ಬೆನ್ನಲ್ಲೇ ಕಂಬಳ ಸಮಿತಿ ಕೋಣಗಳ ಹಿಂಸಾಚಾರವನ್ನು ನಾವು ಒಪ್ಪಲ್ಲ. ಮುಂದೆ ಈ ರೀತಿಯ ಘಟನೆಗಳು ನಡೆದರೆ ಕಂಬಳ ಕೋಣಗಳ ಮಾಲಕರು, ಓಡಿಸುವವರೇ ಜವಾಬ್ದಾರಿ ಎಂದು ಹೇಳಿದೆ.

ಕಂಬಳ ನಡೆಯುವ ಸಂದರ್ಭ ಕೋಣಗಳಿಗೆ ಹಿಂಸೆ ನೀಡಬಾರದೆಂದು ಮೈಕ್ನಲ್ಲಿ ಸೂಚನೆ ನೀಡಲಾಗುತ್ತಿದೆ. ಕೋಣಗಳಿಗೆ ಹೊಡೆಯೋದು ತಪ್ಪು ಎಂದು ಕಂಬಳ ಕೋಣಗಳ ಮಾಲಕರಿಗೂ ಸೂಚನೆ ನೀಡಲಾಗಿದೆ. ಆದರೆ ಕೆಲವರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಮುಂದೆ ಈ ರೀತಿಯಲ್ಲಿ ಘಟನೆಗಳು ಮರುಕಳಿಸಿದಲ್ಲಿ ಕೋಣಗಳ ಮಾಲೀಕರು, ಓಡಿಸುವವರೇ ಜವಾಬ್ದಾರಿ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಪಿ.ಆರ್ ಶೆಟ್ಟಿ ಹೇಳಿದ್ದಾರೆ.
ಕೋಣಗಳನ್ನು ಓಟಕ್ಕೆ ಸಿದ್ಧಪಡಿಸುವಾಗ, ಕರೆ ಬಿಟ್ಟು ಮಂಜೊಟ್ಟಿ(ದಡ) ಸೇರಿದ ಬಳಿಕ ಕೋಣಗಳಿಗೆ ಹೊಡೆಯುವ ದೃಶ್ಯ ಪೇಟಾ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಸುಪ್ರೀಂ ಕೋರ್ಟ್ನ ಪಂಚ ಸದಸ್ಯರ ಪೀಠದಲ್ಲಿ ಕಂಬಳ ನಿಷೇಧದ ವಾದ-ಪ್ರತಿವಾದ ನಡೆಯುತ್ತಿದೆ. ಇದೀಗ ಕಂಬಳದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಪೀಠದ ಮುಂದೆ ಪೇಟ ಇಡುತ್ತಿದೆ.

ಇದರಿಂದ ತುಳುನಾಡಿನ ಪರಂಪರಾಗತ ಕ್ರೀಡೆ ಕಂಬಳಕ್ಕೆ ಮತ್ತೆ ನಿಷೇಧದ ತೂಗುಕತ್ತಿ ತೂಗುತ್ತಿದೆ. ಕಂಬಳದಲ್ಲಿ ಸುಪ್ರೀಂ ಆದೇಶದ ಉಲ್ಲಂಘನೆಯಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆಯಿಂದ ಕಂಬಳ ಸಮಿತಿಗೆ ನೊಟೀಸ್ ನೀಡಿದೆ.
ಕಂಬಳ ಸಮಿತಿಯ ನಿರ್ಣಯದ ಪ್ರಕಾರ ಕನಿಷ್ಠ 24-30 ಗಂಟೆಯೊಳಗೆ ಕಂಬಳ ಮುಗಿಯಬೇಕು. ಆದರೆ ಕೆಲವಡೆ ಕಂಬಳ 35 ಗಂಟೆ ಮೀರಿ ನಡೆಯುತ್ತಿದೆ. ಡಿಸೆಂಬರ್ 31ರಂದು ನಡೆದ ಕಂಬಳದಲ್ಲಿ ಕೋಣಗಳಿಗೆ ರಕ್ತ ಬರುವಂತೆ ಬಾರುಕೋಲಿನಲ್ಲಿ ಹೊಡೆಯುವ ವಿಡಿಯೋ, ಫೋಟೋವನ್ನು ದಾಖಲಿರಿಸಿ ಪಶುಸಂಗೋಪನಾ ಇಲಾಖೆ ಕಂಬಳ ಸಮಿತಿಗೆ ನೋಟಿಸ್ ಕಳುಹಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications