ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು 'ತಲೆ ದೇಹದಿಂದ ಬೇರ್ಪಡುವುದು'
ಮಂಗಳೂರು, ನ 30: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ, ದುಷ್ಕರ್ಮಿಗಳು, ದೇಶದ್ರೋಹಿ ಬರಹವೊಂದನ್ನು ಗೋಡೆಯ ಮೇಲೆ ಬರೆದದ್ದು ಭಾರೀ ಸುದ್ದಿಯಾಗಿತ್ತು. ಈಗ ಅದೇ ರೀತಿಯ ಬರಹ ನಗರದ ಕೋರ್ಟ್ ರಸ್ತೆಯ ಗೋಡೆಯೊಂದರಲ್ಲಿ ಕಾಣಿಸಿಕೊಂಡಿದೆ.
'Gustuk e Rasool ek hi saza sar tan say juda' ಎನ್ನುವ ಗೋಡೆ ಬರಹ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಆ ಗೋಡೆ ಬರಹದ ಅರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು" ಎಂದು.
ಈ ಗೋಡೆ ಬರಹದ ಬಗ್ಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಈ ಗೋಡೆ ಬರಹವನ್ನು ನಾನು ಖಂಡಿಸುತ್ತೇನೆ. ಇದನ್ನ ಯಾರಿಗೇ ಆಗಲಿ ಸಹಿಸಲು ಸಾಧ್ಯವಿಲ್ಲ. ಇದನ್ನು ಪತ್ತೆಹಚ್ಚುವುದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಜವಾಬ್ದಾರಿ. ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ"ಎಂದು ಖಾದರ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕದ್ರಿ ಠಾಣಾ ವ್ಯಾಪ್ತಿಯ ಬಿಜೈ ರಸ್ತೆಯಲ್ಲಿ 'ಲಷ್ಕರ್ ಎ ತೋಯ್ಬಾ ಮತ್ತು ತಾಲಿಬಾನ್ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ತಿಳಿದಿದೆ. ನಮ್ಮನ್ನು ವಿಧ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಜಿಂದಾಬಾದ್' ಎನ್ನುವ ಗೋಡೆಬರಹ, ಭಾರೀ ವಿವಾದವನ್ನು ಹುಟ್ಟುಹಾಕಿತ್ತು.
ಹೋಂಡಾ ಆಕ್ಟೀವಾದಲ್ಲಿ ಬಂದ ಇಬ್ಬರು ಕಿಡಿಗೇಡಿಗಳು (ಮೊದಲ ಘಟನೆ) ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳೂರು ಪೊಲೀಸರು, ದೇಶದ್ರೋಹಿಗಳ ಜಾಡು ಹಿಡಿದು ಕಾರ್ಯಾಚರಣೆ ಈಗಾಗಲೇ ಆರಂಭಿಸಿದ್ದಾರೆ.
ಈ ಘಟನೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿ ಸಿ.ಟಿ.ರವಿ ವಿಷಾದ ವ್ಯಕ್ತ ಪಡಿಸಿ, "ಭಯೋತ್ಪಾದಕರನ್ನು ಸ್ಮಶಾನಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಸೈನಿಕರು ಮತ್ತು ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಾರೆ'ಎಂದು ಹೇಳಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications