ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು 'ತಲೆ ದೇಹದಿಂದ ಬೇರ್ಪಡುವುದು'
ಮಂಗಳೂರು, ನ 30: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ, ದುಷ್ಕರ್ಮಿಗಳು, ದೇಶದ್ರೋಹಿ ಬರಹವೊಂದನ್ನು ಗೋಡೆಯ ಮೇಲೆ ಬರೆದದ್ದು ಭಾರೀ ಸುದ್ದಿಯಾಗಿತ್ತು. ಈಗ ಅದೇ ರೀತಿಯ ಬರಹ ನಗರದ ಕೋರ್ಟ್ ರಸ್ತೆಯ ಗೋಡೆಯೊಂದರಲ್ಲಿ ಕಾಣಿಸಿಕೊಂಡಿದೆ.
'Gustuk e Rasool ek hi saza sar tan say juda' ಎನ್ನುವ ಗೋಡೆ ಬರಹ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಆ ಗೋಡೆ ಬರಹದ ಅರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು" ಎಂದು.
ಈ ಗೋಡೆ ಬರಹದ ಬಗ್ಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಈ ಗೋಡೆ ಬರಹವನ್ನು ನಾನು ಖಂಡಿಸುತ್ತೇನೆ. ಇದನ್ನ ಯಾರಿಗೇ ಆಗಲಿ ಸಹಿಸಲು ಸಾಧ್ಯವಿಲ್ಲ. ಇದನ್ನು ಪತ್ತೆಹಚ್ಚುವುದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಜವಾಬ್ದಾರಿ. ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ"ಎಂದು ಖಾದರ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕದ್ರಿ ಠಾಣಾ ವ್ಯಾಪ್ತಿಯ ಬಿಜೈ ರಸ್ತೆಯಲ್ಲಿ 'ಲಷ್ಕರ್ ಎ ತೋಯ್ಬಾ ಮತ್ತು ತಾಲಿಬಾನ್ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ತಿಳಿದಿದೆ. ನಮ್ಮನ್ನು ವಿಧ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಜಿಂದಾಬಾದ್' ಎನ್ನುವ ಗೋಡೆಬರಹ, ಭಾರೀ ವಿವಾದವನ್ನು ಹುಟ್ಟುಹಾಕಿತ್ತು.
ಹೋಂಡಾ ಆಕ್ಟೀವಾದಲ್ಲಿ ಬಂದ ಇಬ್ಬರು ಕಿಡಿಗೇಡಿಗಳು (ಮೊದಲ ಘಟನೆ) ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳೂರು ಪೊಲೀಸರು, ದೇಶದ್ರೋಹಿಗಳ ಜಾಡು ಹಿಡಿದು ಕಾರ್ಯಾಚರಣೆ ಈಗಾಗಲೇ ಆರಂಭಿಸಿದ್ದಾರೆ.
ಈ ಘಟನೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿ ಸಿ.ಟಿ.ರವಿ ವಿಷಾದ ವ್ಯಕ್ತ ಪಡಿಸಿ, "ಭಯೋತ್ಪಾದಕರನ್ನು ಸ್ಮಶಾನಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಸೈನಿಕರು ಮತ್ತು ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಾರೆ'ಎಂದು ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications