ಬಾಳಿಗಾ ಕೊಲೆ ಆರೋಪಿ ನರೇಶ್ ಶೆಣೈ ಮೇಲೆ ಮತ್ತೊಂದು ಎಫ್ಐಆರ್
ಆರ್.ಟಿ.ಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಉದ್ಯಮಿ ನರೇಶ್ ಶೆಣೈ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮಂಗಳೂರು, ಮಾರ್ಚ್ 14: ಆರ್.ಟಿ.ಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಉದ್ಯಮಿ ನರೇಶ್ ಶೆಣೈ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಭರತ್ ಕಾಮತ್ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನುವ ಹಿನ್ನಲೆಯಲ್ಲಿ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
"ಮಾರ್ಚ್ 12ರಂದು ಮಂಗಳೂರಿನ ಡೊಂಗರಕೇರಿಯ ಮೈದಾನಕ್ಕೆ ಬರುವಂತೆ ಹೇಳಿ, ಕಾರನ್ನು ಅಡ್ಡಗಟ್ಟಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಭರತ್ ಕಾಮತ್ ಎಂಬುವವರು ಇಂದು (ಮಾರ್ಚ್ 14) ಸಂಜೆ ಆರು ಗಂಟೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನರೇಶ್ ಶೆಣೈ ವಿರುದ್ಧ ಐಪಿಸಿ ಸೆಕ್ಷನ್ 341 ಹಾಗೂ 506 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ," ಎಂದು ಬಂದರು ಪೊಲೀಸ್ ಠಾಣೆಯ ಮೂಲಗಳು ಮಾಹಿತಿ ನೀಡಿದ್ದಾರೆ.[ಇಬ್ಬರ ಬಾಳಿಗೆ ಬೆಳಕಾದ ವಿನಾಯಕ ಬಾಳಿಗ ತಾಯಿ ಕಣ್ಣು!]

ಈ ಹಿಂದೆ ಅಯ್ಯಪ್ಪ ಸ್ವಾಮಿ ದೇವರಲ್ಲ, ದೈವ ಎಂದು ಕಾಶೀ ಮಠದ ಸಂಯಮೀಂದ್ರ ತೀರ್ಥರು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಭರತ್ ಕಾಮತ್ ಸಂಯಮೀಂದ್ರರ ವಿರುದ್ಧ ಪ್ರಕರಣ ದಾಖಲಿಸಿದ್ದರು ಎಂದು ಹೇಳಲಾಗಿದೆ.
ಈ ಸಂಬಂಧ "ಕಾಶೀ ಮಠದ ಸ್ವಾಮೀಜಿಗಳ ಪ್ರಕರಣದಲ್ಲಿ ನೀನು ಅಷ್ಟರ ಮಟ್ಟಿಗೆ ಮುಂದುವರಿದಿದ್ದೀಯ? ಎಂದು ಪ್ರಶ್ನಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಭರತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ," ಎಂದು ಪೊಲೀಸ್ ಮೂಲಗಳು ಹೇಳಿವೆ.
ನರೇಶ್ ಶೆಣೈ ಈಗಾಗಲೇ ವಿನಾಯಕ್ ಬಾಳಿಗಾ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ಅವರ ಮೇಲೆ ಮತ್ತೊಂದು ಕೊಲೆಯ ಬೆದರಿಕೆಯ ದೂರು ದಾಖಲಾದಂತಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications