ಮಂಗಳೂರಿನಲ್ಲಿ ಮತಾಂಧರ ಮತ್ತೊಂದು ಗೋಡೆ ಬರಹ: ಸರ್ಕಾರಕ್ಕೆ ತಲೆನೋವು
ಮಂಗಳೂರು, ನವೆಂಬರ್ 29: ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಕಿಡಿಗೇಡಿಗಳ ಗೋಡೆ ಬರಹ ಸ್ಥಳೀಯ ಪೊಲೀಸರಿಗೆ ಮಾತ್ರವಲ್ಲದೆ, ರಾಜ್ಯ ಬಿಜೆಪಿ ಸರ್ಕಾರಕ್ಕೂ ಸಾಕಷ್ಟು ತಲೆನೋವು ತಂದಿದೆ.
ಮತಾಂಧರ ಗೋಡೆ ಬರಹ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತೊಂದು ಕಡೆ ಬೆದರಿಕೆ ಗೋಡೆ ಬರಹ ಪತ್ತೆಯಾಗಿದೆ.
ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಮತಾಂಧರ ಮತ್ತೊಂದು ಗೋಡೆ ಬರಹ ಕಾಣಿಸಿಕೊಂಡಿದೆ. ಕೋರ್ಟ್ ಆವರಣದ ಜನರೇಟರ್ ರೂಂ ಗೋಡೆಯ ಮೇಲೆ "Gustak E Rasool ek hi saza Sar tan say juda " ಅಂದರೆ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡಿಸುವುದು" ಎಂಬರ್ಥದ ಬರಹವನ್ನು ಕಿಡಿಗೇಡಿಗಳು ಬರೆದಿದ್ದಾರೆ.

ಇತ್ತೀಚಿಗಿನ ಬಿಜೈ ಅಪಾರ್ಟ್ಮೆಂಟ್ ಆವರಣದಲ್ಲಿ ಉಗ್ರರ ಪರ ಬರಹದ ಬೆನ್ನಲ್ಲೆ ಮತ್ತೊಂದು ಕಿಡಿಗೇಡಿ ಕೃತ್ಯ ಎಸಗಲಾಗಿದ್ದು, ಈ ಸಂಬಂಧ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶನಿವಾರ ಸಂಜೆ ಬೆಳಕಿಗೆ ಬಂದಿರುವ ಈ ಗೋಡೆ ಬರಹ ಇದಾಗಿದ್ದು, ಬಿಜೈ ಹಾಗೂ ಕೋರ್ಟ್ ಅವರಣದ ಗೋಡೆ ಬರಹಕ್ಕೂ ಸಾಮ್ಯತೆ ಇದೆ. ಎರಡು ಕೃತ್ಯ ಒಂದೇ ತಂಡ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬೈಕ್ ನಲ್ಲಿ ಬಂದು ಸ್ಪ್ರೇ ಪೇಂಟ್ ಮೂಲಕ ಗೋಡೆ ಬರಹ ಬರೆದು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಶಂಕಿತರ ವಿಚಾರಣೆ ನಡೆಸುತ್ತಿರುವುದರ ಜೊತೆಗೆ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications