ಮಂಗಳೂರನ್ನು ಸ್ವಚ್ಛ ನಗರವಾಗಿ ಮಾಡಲು ಸಚಿವರ ಪಣ
ಮಂಗಳೂರು, ಜ. 24 : ಸ್ವಚ್ಛತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಾದರಿಯಾಗಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಮಂಗಳೂರಿನ ಲಾಲ್ಬಾಗ್ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ನೂತನ ಘನ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಣೆ ಯೋಜನೆ ಉದ್ಘಾಟಿಸಿ ಶುಕ್ರವಾರ ಮಾತನಾಡಿದ ಅವರು, ಘನತ್ಯಾಜ್ಯ ವಿಲೇವಾರಿ ಎಲ್ಲ ಸ್ಥಳೀಯಾಡಳಿತಕ್ಕೂ ಬಹುದೊಡ್ಡ ಸವಾಲಾಗಿದೆ ಎಂದರು. [ಮಂಗಳೂರು ಪಾಲಿಕೆಗೆ ಕೊನೆಗೂ ಆಯುಕ್ತರ ನೇಮಕ]

ಸುರತ್ಕಲ್ ಬಳಿ ಒಟ್ಟು 588 ಕೋಟಿ ರೂ.ನ ಎರಡನೇ ಹಂತದ ಕುಡ್ಸೆಂಪ್ ಯೋಜನೆಯನ್ನು ಅಳವಡಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ ಅವರು, ಮೂರನೇ ಹಂತದ ನಗರೋತ್ಥಾನ ಕ್ರಿಯಾ ಯೋಜನೆಯೂ ಮಂಜೂರಾಗಿದೆ ಎಂದರು. [ಆಸ್ತಿ ತೆರಿಗೆ ಪಾವತಿಸಲು ಆನ್ ಲೈನ್ ವ್ಯವಸ್ಥೆ]
ಮಂಗಳೂರು ಮಹಾನಗರ ಪಾಲಿಕೆಗೆ 13ನೇ ಹಣಕಾಸು ಯೋಜನೆಯಲ್ಲಿ 40 ಕೋಟಿ ರೂ., ಎಸ್ಎಫ್ಸಿಯಲ್ಲಿ 22 ಕೋಟಿ ರೂ., ಸ್ಮಶಾನ ಮತ್ತು ಉದ್ಯಾನವನ ಅಭಿವೃದ್ಧಿಗೆ 2.5 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ನಗರಾಡಳಿತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಒಳಚರಂಡಿ ಮತ್ತು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆ ಮೇಯರ್ ಮಹಾಬಲ ಮಾರ್ಲ, ಆಯುಕ್ತೆ ಹೆಪ್ಸಿಬಾ ರಾಣಿ, ಶಾಸಕರಾದ ಜೆ.ಆರ್.ಲೋಬೋ, ಮೊಯ್ದೀನ್ ಬಾವ, ಉಪಮೇಯರ್ ಕವಿತಾ, ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಸ ಸಂಗ್ರಹಣೆಗೆ ವಿಶೇಷ ಯೋಜನೆ : ಮನೆ ಮನೆ ಕಸ ಸಂಗ್ರಹಕ್ಕೆ 55 ಮಿನಿ ಟಿಪ್ಪರ್, 700 ಸಿಬ್ಬಂದಿ, ಯಾಂತ್ರಿಕ ಕಸ ಗುಡಿಸುವ ವಾಹನ, ಚರಂಡಿ ಸ್ವಚ್ಛಗೊಳಿಸುವ ಮೂರು ಯಂತ್ರವನ್ನು ಪಾಲಿಕೆಗೆ ತರಲಾಗಿದೆ. ವಾರದ ಪ್ರತಿದಿನವೂ ಹಸಿ ಕಸವನ್ನು ಸಂಗ್ರಹಿಸಲಾಗುವುದು. ಪ್ರತಿ ಬುಧವಾರ ಸಾರ್ವಜನಿಕರು ಒಣಕಸವನ್ನು ಪ್ರತ್ಯೇಕವಾಗಿ ನೀಡಬಹುದು ಎಂದು ಪಾಲಿಕೆ ತಿಳಿಸಿದೆ. [ಚಿತ್ರಗಳು : ಐಸಾಕ್ ರಿಚರ್ಡ್, ಮಂಗಳೂರು]
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications