ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!
Recommended Video

ಮಂಗಳೂರು, ಆಗಸ್ಟ್ 21 : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.
ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.
ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು.

ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications