Get Updates
Get notified of breaking news, exclusive insights, and must-see stories!

ಪಿಎಫ್ಐ ನಾಯಕರ ಮೇಲಿನ ಕೇಸ್ ಹಿಂಪಡೆದ ದಾಖಲೆ ಇದ್ದರೆ ಬಹಿರಂಗಪಡಿಸಿ; ಬಿಜೆಪಿಗೆ ಯುಟಿ ಖಾದರ್ ಸವಾಲ್

ಮಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಪಿಎಫ್ಐ ನಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆದ ದಾಖಲೆಗಳಿದ್ದರೆ ಬಿಜೆಪಿ ಸರ್ಕಾರ ಬಹಿರಂಗಪಡಿಸಲಿ ಎಂದು ಮಂಗಳೂರಿನಲ್ಲಿ ವಿಧಾನಸಭಾ ಪ್ರತಿಪಕ್ಷದ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಢಿ ನಡೆಸಿದ ಅವರು, ಕಾಂಗ್ರೆಸ್ ನಿಂದ ಪಿಎಫ್ಐ ಒಲೈಕೆಯ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸಮಾಜದಲ್ಲಿ ಅಶಾಂತಿ, ಭಯ ಕೊಲೆ ಮಾಡುವ ಯಾರೇ ಆಗಲಿ ಅವರ ವಿರುದ್ಧ ಸಾಕ್ಷ್ಯಾಧಾರ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಈ ಕಾನೂನುನ್ನು ಅನ್ವಯ ಮಾಡಬೇಕು. ರಾಜ್ಯದಲ್ಲಿ ಈಗ ಸರ್ಕಾರ ಬಿಜೆಪಿ ನಡೆಸುತ್ತಿದೆ. ನಾವು ಪಿಎಫ್ಐ ನಾಯಕರ ಕೇಸ್ ಹಿಂಪಡೆದ ಸಾಕ್ಷಿ ತೋರಿಸಲಿ‌. ಸರ್ಕಾರದ ಬಳಿ ದಾಖಲೆ ಇದ್ದರೆ ತೋರಿಸಲಿ. ನಮ್ಮ ಅವಧಿಯಲ್ಲಿ ಗುಂಪು ಗಲಭೆ, ರೈತರ ಹೋರಾಟ ಆದಾಗ ಆಗ ಹಾಕಿದ ಕೇಸ್‌ಗಳನ್ನು ಹಿಂಪಡೆದಿರಬಹುದು. ಬಿಜೆಪಿ ಅಪಪ್ರಚಾರ ಮಾಡುವ ಬದಲು ಸಾಕ್ಷ್ಯಾಧಾರವನ್ನು ತೋರಿಸಲಿ. ಇವರ ಕಾಲದಲ್ಲಿ ಯಾರ ಕೇಸ್ ಹಿಂಪಡೆದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಯುಟಿ ಖಾದರ್ ಸವಾಲೆಸಿದಿದ್ದಾರೆ.

ಇನ್ನು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಯುಟಿ ಖಾದರ್ ತಮಿಳುನಾಡಿನಿಂದ ಕೇರಳರವರೆಗೆ ಯಾತ್ರೆ ತಲುಪಿದೆ. ಅಕ್ಟೋಬರ್2 ರಂದು ಚಾಮರಾಜನಗರದ ಗುಂಡ್ಲುಪೇಟೆಗೆ ಯಾತ್ರೆ ಬರಲಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಐದು ಸಾವಿರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಮೂರುವರೆ ಸಾವಿರ ಕೀಮೀ ನಡೆಯುವ ಒಬ್ಬನೇ ನಾಯಕ ಇದ್ದರೆ ಅದು ರಾಹುಲ್ ಗಾಂಧಿ ಮಾತ್ರ.

Any Record on Congresss Withdrawal the Cases Against PFI Leaders, Disclose it: UT Khader to BJP

ರಾಹುಲ್ ಗಾಂಧಿ ಸರ್ವ ಜನರನ್ನು ಬೆರೆಸುವ ಉದ್ದೇಶದಿಂದ ಈ ಯಾತ್ರೆ ಮಾಡುತ್ತಿದ್ದಾರೆ. ಅವಿಶ್ವಾಸ ಮೂಡಿಸುವ , ಜಾತಿ ಧರ್ಮ ಹೆಸರಿನಲ್ಲಿ ಒಡೆಯುವ ಕೆಲಸ ಸರ್ಕಾರ ಮಾಡುತ್ತಿದೆ. ರಾಹುಲ್ ಯಾತ್ರೆ ಸರ್ವರನ್ನು ಜೋಡಿಸುವ ಯಾತ್ರೆ ಮಾಡುತ್ತಿದ್ದಾರೆ. ದೇಶದಲ್ಲಿ ಯಾರೂ ನೆಮ್ಮದಿಯಿಂದ ಜೀವನ ಮಾಡುತ್ತಿಲ್ಲ. ಮಕ್ಕಳಿಗೆ ಚಾಕಲೇಟ್ ತೆಗೆದು ಕೊಡಲೂ ಯೋಚನೆ ಮಾಡಬೇಕಾದ ಸ್ಥಿತಿ ದೇಶದಲ್ಲಿದೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ. ಆದರೆ ಬಡವರು ಮಾತ್ರ ಬಡವರಾಗಿಯೇ ಉಳಿಯುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಸಾರ್ವಜನಿಕ ಸ್ಥಳದಲ್ಲಿ ಪೇಸಿಎಂ ಎಂಬ ಕಾಂಗ್ರೆಸ್ ಭಿತ್ತಿಪತ್ರದ ಬಗ್ಗೆ ಮಾತನಾಡಿದ ಯುಟಿ ಖಾದರ್, ಕಾಂಗ್ರೆಸ್ ಭಿತ್ತಿ ಪತ್ರ ಅಂಟಿಸಿದರೆ ಹೈ ಕೋರ್ಟ್ ಆದೇಶ ಉಲ್ಲಂಘನೆ ಎಂದು ಆಗುತ್ತದೆ. ಆದರೆ ಬಿಜೆಪಿಯವರು ಏನು ಬೇಕಾದರೂ ಮಾಡಬಹುದು. ಕಾಂಗ್ರೆಸ್ ಮಾಡಿದರೆ ಮಾತ್ರ ಕಾಣೋದು. ನಾವು ನಮ್ಮ ಅಭಿಯಾನವನ್ನು ಮಾಡುತ್ತೇವೆ. ಈ ಪ್ರಚಾರವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ್ದು ಬಿಜೆಪಿ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಪೋಸ್ಟರ್ ಹಾಕಿಲ್ವಾ. ಆಗ ಕಾನೂನು ಇರಲಿಲ್ವಾ ಎಂದು ಯುಟಿ ಖಾದರ್ ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+