ಪಿಎಫ್ಐ ನಾಯಕರ ಮೇಲಿನ ಕೇಸ್ ಹಿಂಪಡೆದ ದಾಖಲೆ ಇದ್ದರೆ ಬಹಿರಂಗಪಡಿಸಿ; ಬಿಜೆಪಿಗೆ ಯುಟಿ ಖಾದರ್ ಸವಾಲ್
ಮಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಪಿಎಫ್ಐ ನಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆದ ದಾಖಲೆಗಳಿದ್ದರೆ ಬಿಜೆಪಿ ಸರ್ಕಾರ ಬಹಿರಂಗಪಡಿಸಲಿ ಎಂದು ಮಂಗಳೂರಿನಲ್ಲಿ ವಿಧಾನಸಭಾ ಪ್ರತಿಪಕ್ಷದ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಢಿ ನಡೆಸಿದ ಅವರು, ಕಾಂಗ್ರೆಸ್ ನಿಂದ ಪಿಎಫ್ಐ ಒಲೈಕೆಯ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸಮಾಜದಲ್ಲಿ ಅಶಾಂತಿ, ಭಯ ಕೊಲೆ ಮಾಡುವ ಯಾರೇ ಆಗಲಿ ಅವರ ವಿರುದ್ಧ ಸಾಕ್ಷ್ಯಾಧಾರ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಈ ಕಾನೂನುನ್ನು ಅನ್ವಯ ಮಾಡಬೇಕು. ರಾಜ್ಯದಲ್ಲಿ ಈಗ ಸರ್ಕಾರ ಬಿಜೆಪಿ ನಡೆಸುತ್ತಿದೆ. ನಾವು ಪಿಎಫ್ಐ ನಾಯಕರ ಕೇಸ್ ಹಿಂಪಡೆದ ಸಾಕ್ಷಿ ತೋರಿಸಲಿ. ಸರ್ಕಾರದ ಬಳಿ ದಾಖಲೆ ಇದ್ದರೆ ತೋರಿಸಲಿ. ನಮ್ಮ ಅವಧಿಯಲ್ಲಿ ಗುಂಪು ಗಲಭೆ, ರೈತರ ಹೋರಾಟ ಆದಾಗ ಆಗ ಹಾಕಿದ ಕೇಸ್ಗಳನ್ನು ಹಿಂಪಡೆದಿರಬಹುದು. ಬಿಜೆಪಿ ಅಪಪ್ರಚಾರ ಮಾಡುವ ಬದಲು ಸಾಕ್ಷ್ಯಾಧಾರವನ್ನು ತೋರಿಸಲಿ. ಇವರ ಕಾಲದಲ್ಲಿ ಯಾರ ಕೇಸ್ ಹಿಂಪಡೆದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಯುಟಿ ಖಾದರ್ ಸವಾಲೆಸಿದಿದ್ದಾರೆ.
ಇನ್ನು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಯುಟಿ ಖಾದರ್ ತಮಿಳುನಾಡಿನಿಂದ ಕೇರಳರವರೆಗೆ ಯಾತ್ರೆ ತಲುಪಿದೆ. ಅಕ್ಟೋಬರ್2 ರಂದು ಚಾಮರಾಜನಗರದ ಗುಂಡ್ಲುಪೇಟೆಗೆ ಯಾತ್ರೆ ಬರಲಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಐದು ಸಾವಿರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಮೂರುವರೆ ಸಾವಿರ ಕೀಮೀ ನಡೆಯುವ ಒಬ್ಬನೇ ನಾಯಕ ಇದ್ದರೆ ಅದು ರಾಹುಲ್ ಗಾಂಧಿ ಮಾತ್ರ.

ರಾಹುಲ್ ಗಾಂಧಿ ಸರ್ವ ಜನರನ್ನು ಬೆರೆಸುವ ಉದ್ದೇಶದಿಂದ ಈ ಯಾತ್ರೆ ಮಾಡುತ್ತಿದ್ದಾರೆ. ಅವಿಶ್ವಾಸ ಮೂಡಿಸುವ , ಜಾತಿ ಧರ್ಮ ಹೆಸರಿನಲ್ಲಿ ಒಡೆಯುವ ಕೆಲಸ ಸರ್ಕಾರ ಮಾಡುತ್ತಿದೆ. ರಾಹುಲ್ ಯಾತ್ರೆ ಸರ್ವರನ್ನು ಜೋಡಿಸುವ ಯಾತ್ರೆ ಮಾಡುತ್ತಿದ್ದಾರೆ. ದೇಶದಲ್ಲಿ ಯಾರೂ ನೆಮ್ಮದಿಯಿಂದ ಜೀವನ ಮಾಡುತ್ತಿಲ್ಲ. ಮಕ್ಕಳಿಗೆ ಚಾಕಲೇಟ್ ತೆಗೆದು ಕೊಡಲೂ ಯೋಚನೆ ಮಾಡಬೇಕಾದ ಸ್ಥಿತಿ ದೇಶದಲ್ಲಿದೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ. ಆದರೆ ಬಡವರು ಮಾತ್ರ ಬಡವರಾಗಿಯೇ ಉಳಿಯುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಸಾರ್ವಜನಿಕ ಸ್ಥಳದಲ್ಲಿ ಪೇಸಿಎಂ ಎಂಬ ಕಾಂಗ್ರೆಸ್ ಭಿತ್ತಿಪತ್ರದ ಬಗ್ಗೆ ಮಾತನಾಡಿದ ಯುಟಿ ಖಾದರ್, ಕಾಂಗ್ರೆಸ್ ಭಿತ್ತಿ ಪತ್ರ ಅಂಟಿಸಿದರೆ ಹೈ ಕೋರ್ಟ್ ಆದೇಶ ಉಲ್ಲಂಘನೆ ಎಂದು ಆಗುತ್ತದೆ. ಆದರೆ ಬಿಜೆಪಿಯವರು ಏನು ಬೇಕಾದರೂ ಮಾಡಬಹುದು. ಕಾಂಗ್ರೆಸ್ ಮಾಡಿದರೆ ಮಾತ್ರ ಕಾಣೋದು. ನಾವು ನಮ್ಮ ಅಭಿಯಾನವನ್ನು ಮಾಡುತ್ತೇವೆ. ಈ ಪ್ರಚಾರವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ್ದು ಬಿಜೆಪಿ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಪೋಸ್ಟರ್ ಹಾಕಿಲ್ವಾ. ಆಗ ಕಾನೂನು ಇರಲಿಲ್ವಾ ಎಂದು ಯುಟಿ ಖಾದರ್ ಪ್ರಶ್ನಿಸಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications