ಹಲಸಿನ ಹಣ್ಣಿನಿಂದ ಸೋಪ್ ತಯಾರಿಸಿದ ವಿಟ್ಲದ ಅಪರ್ಣಾ
ಮಂಗಳೂರು ಜೂನ್ 22: ಹಲಸಿನ ಕಾಯಿ, ಹಣ್ಣು, ಹಲಸಿನ ಬೀಜ ಎಲ್ಲದರಿಂದಲೂ ಖಾದ್ಯಗಳನ್ನು ತಯಾರಿಸಬಹುದು. ಹಲಸಿನ ಹಣ್ಣಿನ ಐಸ್ಕ್ರೀಂ, ಐಸ್ ಕ್ಯಾಂಡಿ, ಹೋಳಿಗೆ, ಹಲಸಿನ ಹಣ್ಣಿನ ಹಲ್ವ, ಚಾಟ್ಸ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್, ಪಲಾವ್, ಪೋಡಿ, ಹಲಸಿನ ಬೀಜದ ಆಂಬೊಡೆ, ಹಲಸಿನಕಾಯಿ ಆಂಬೊಡೆ, ಹಲಸಿನ ಬೀಜದ ಜಾಮೂನ್ ಹೀಗೆ ಥರಾವರಿ ಖಾದ್ಯಗಳನ್ನು ತಯಾರಿಸಲಾಗುತ್ತಿದೆ.
ಹಲಸಿನ ಮೌಲ್ಯವರ್ಧನೆ ಹಾಗೂ ಸಂರಕ್ಷಣೆಗಾಗಿ ಕೆಲವು ವರ್ಷಗಳಿಂದ ಹೊಸ ಹೊಸ ಆವಿಷ್ಕಾರಗಳೂ ನಡೆಯುತ್ತಲೇ ಇವೆ. ಆದರೆ ಹಲಸನ್ನು ಖಾದ್ಯವಾಗಿ ಮಾತ್ರವಲ್ಲ, ಸೌಂದರ್ಯ ವರ್ಧಕವಾಗಿಯೂ ಬಳಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ವಿಟ್ಲದ ಅಪರ್ಣಾ.

ನಮ್ಮ ಆರೋಗ್ಯಕ್ಕೆ, ಸೌಂದರ್ಯಕ್ಕೆ ಲಾಭದಾಯಕವಾದ ಹಲವಾರು ಪೋಷಕಾಂಶಗಳನ್ನು ಹಲಸು ಹೊಂದಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ. ಪೊಟೊಷಿಯಂ ಕ್ಯಾಲ್ಸಿಯಂ, ಕಬ್ಬಿಣಂಶಗಳಿವೆ. ನಾರಿನಂಶ ಕೂಡ ಹೇರಳವಾಗಿದೆ.
ಇದನ್ನೇ ಗಮನಿಸಿದ ಬಂಟ್ವಾಳ ತಾಲೂಕಿನ ವಿಟ್ಲದ ಅಪರ್ಣಾ ಹರೀಶ್ ಅವರು ಹಲಸಿನ ಹಣ್ಣಿನಿಂದ ಸೋಪ್ ತಯಾರಿಸಿ ಸೈ ಎನಿಸಿಕೊಂಡಿದ್ದಾರೆ. ಅಪರ್ಣಾ ಹರೀಶ್, ಹಲಸಿನ ತೊಳೆ, ಕ್ಯಾಲಮಿನ್ ಪೌಡರ್, ತೆಂಗಿನೆಣ್ಣೆ, ಹರಳೆಣ್ಣೆಯನ್ನು ಬೆರೆಸಿ ತಯಾರಿಸಿರುವ ಈ ಸೋಪು ವಿಟಮಿನ್ ಸಿ ಮತ್ತು ಡಿ ಅಂಶಗಳನ್ನು ಒಳಗೊಂಡಿದೆ.

ಪ್ರಸ್ತುತ ಚೆನ್ನೈಯಲ್ಲಿ ನೆಲೆಸಿರುವ ಅಪರ್ಣಾ ಅವರು ತಾವು ತಯಾರಿಸಿದ ಸೋಪ್ ಗೆ 'ಝ್ಯ' ಎಂದು ಹೆಸರಿಟ್ಟಿದ್ದಾರೆ. ಸೋಪು ತಯಾರಿಕೆ ನಂತರ, ಹಲಸಿನ ಹಣ್ಣಿನ ಶ್ಯಾಂಪೂ ಯಾವ ರೀತಿ ಕೂದಲಿನ ಸೌಂದರ್ಯ ಇಮ್ಮಡಿಗೊಳಿಸಲು ನೆರವಾಗುತ್ತದೆ ಎಂಬುದರ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಅದಾದ ಬಳಿಕ ಟಾಲ್ಕಂ ಪೌಡರ್ ಆವಿಷ್ಕರಿಸುವ ಆಲೋಚನೆಯೂ ಇದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications