ಅಪಾರ್ಟ್ಮೆಂಟ್ ನಿವಾಸಿಗಳಿಗೆ 1 ಗಂಟೆ ಮಾತ್ರ ನೀರು
ಮಂಗಳೂರು, ಮೇ 09 : ಮಂಗಳೂರು ನಗರದಲ್ಲಿ ಮಳೆ ಬರುವ ಸೂಚನೆ ಕಾಣಿಸುತ್ತಿಲ್ಲ. ಬೆಳ್ತಂಗಡಿ, ಧರ್ಮಸ್ಥಳಕ್ಕಾದರೂ ಮಳೆ ಬಂದರೆ ಸಾಕು ಎನ್ನುವಷ್ಟರ ಮಟ್ಟಿಗೆ ನೀರಿನ ದಾಹ ಜಾಸ್ತಿಯಾಗಿದೆ. ಕಾಲೋನಿಯ ಮನೆಗಳಿಗೆ ಸೀಮಿತವಾಗಿದ್ದ ಕುಡಿಯುವ ನೀರಿನ ಬಿಸಿ ಈಗ ವಸತಿ ಸಮುಚ್ಛಯಗಳಿಗೂ ತಟ್ಟಿದೆ.
ನಗರದ ಹಲವು ಅಪಾರ್ಟ್ಮೆಂಟ್ಗಳಲ್ಲಿ ಸಮಯ ನಿಗದಿಪಡಿಸಿ ದಿನದಲ್ಲಿ 1 ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ. ಅಷ್ಟು ಹೊತ್ತಿನಲ್ಲಿ ಸಾಧ್ಯವಾದಷ್ಟು ನೀರನ್ನು ಶೇಖರಿಸಿಕೊಳ್ಳಬೇಕು. ಅಪಾರ್ಟ್ಮೆಂಟ್ಗಳಲ್ಲಿ ನೀರು ಸಂಗ್ರಹಿಸಿಡಲು ಸಾಧ್ಯವಾಗದೆ ಜನರು ಪರದಾಡುವಂತಾಗಿದೆ. [ಮಂಗಳೂರಿನ ಹಾಸ್ಟೆಲ್ ತೊರೆದ ಸಾವಿರಾರು ವಿದ್ಯಾರ್ಥಿಗಳು]

ಭಾನುವಾರ ನಗರದ ಹಲವು ವಸತಿ ಸಮುಚ್ಛಯಗಳಲ್ಲಿ ನೀರಿಲ್ಲದೆ ಜನರು ತೊಂದರೆ ಅನುಭವಿಸಿದ್ದಾರೆ. ಖಾಸಗಿ ಟ್ಯಾಂಕರ್, ಮನಪಾ ಟ್ಯಾಂಕರ್ಗೆ ಕರೆ ಮಾಡಿದರೂ ಪ್ರತಿಕ್ರಿಯೆ ನೀಡುವವರು ಇಲ್ಲ. ಅವರಾದರೂ ನೀರನ್ನು ಎಲ್ಲಿಂದ ತರಬೇಕು?.[ನೀರಿನ ಅಭಾವ, ನೇತ್ರಾವತಿ ನದಿಗೆ ಕಾವಲು!]
ದೆರೆಬೈಲ್, ಲೇಡಿಹಿಲ್, ಕದ್ರಿ ಹ್ಯಾಟ್ ಹಿಲ್ ಸೇರಿದಂತೆ ನಗರದ ಕೆಲವು ಅಪಾರ್ಟ್ಮೆಂಟ್ಗಳಿಗೆ ಮಹಾನಗರ ಪಾಲಿಕೆ ನೀರು ಸರಬರಾಜು ಮಾಡದೆ ತಿಂಗಳುಗಳು ಕಳೆದಿವೆ. ಕೆಲವು ದಿನದಿಂದ ಸಮಯ ನಿಗದಿ ಪಡಿಸಿ ನೀರು ಬಿಡಲಾಗುತ್ತಿದೆ. ನೀರು ಬಿಡುವ ವೇಳೆ ಎಲ್ಲಿದ್ದರೂ ನಿವಾಸಿಗಳು ವಾಪಸ್ ಬರಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಅಪಾರ್ಟ್ಮೆಂಟ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸುಧಾಕರ್ ಮಣ್ಣಗುಡ್ಡ. [ಬತ್ತಿದ ನೇತ್ರಾವತಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಕೊರತೆ]
ಹೋಟೆಲ್, ರೆಸ್ಟೋರೆಂಟ್ಗೆ ದೌಡು : ವೀಕೆಂಡ್ ಸಮಯದಲ್ಲಿ ಹೋಟೆಲ್, ಐಸ್ ಕ್ರೀಮ್ ಪಾರ್ಲರ್, ರೆಸ್ಟೋರೆಂಟ್ಗಳಲ್ಲಿ ಹೆಚ್ಚಿನ ಜನರು ಇರುತ್ತಾರೆ. ಆದರೆ, ಮೇ 8ರ ಭಾನುವಾರ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿತ್ತು. ನಗರದ ನಿವಾಸಿಗಳು ನೀರಿನ ಸಮಸ್ಯೆಯಿಂದ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳಲು ಸಂಜೆ ಹೊತ್ತು ಹೋಟೆಲ್, ರೆಸ್ಟೋರೆಂಟ್ಗೆ ಊಟಕ್ಕೆ ದೌಡಾಯಿಸುತ್ತಿದ್ದಾರೆ. [ಹೆಸರು ಅಶೋಕ ಪ್ಯಾರಡೈಸ್, ಕುಡಿಯಲು ಮಾತ್ರ ನೀರಿಲ್ಲ!]
ರಜೆಯಿಂದ ಬಚಾವ್ : ಶಾಲೆಗೆ ರಜೆ ಇರುವುದರಿಂದ ಕೆಲವು ಅಪಾರ್ಟ್ಮೆಂಟ್ಗಳಲ್ಲಿ ಒಬ್ಬರು ಮಾತ್ರವಿದ್ದು, ಉಳಿದವರನ್ನು ಊರಿಗೆ ಕಳುಹಿಸಿ ಕೊಡಲಾಗಿದೆ. ಇನ್ನೂ ನೀರಿನ ಸಮಸ್ಯೆ ಎದುರಾದರೆ ರಜೆ ಹಾಕಿ ಊರಿಗೆ ಹೋಗಬೇಕಾಗುತ್ತದೆ ಎನ್ನುತ್ತಾರೆ ನಿವಾಸಿಗಳು.
ಅಧಿಕಾರಿಗಳಿಗೆ ರಜೆ ಇಲ್ಲ : ಮಳೆ ಬಂದು ನಗರದಲ್ಲಿ ನೀರಿನ ಸಮಸ್ಯೆ ಪರಿಹಾರವಾಗುವವರೆಗೆ ಯಾವ ಅಧಿಕಾರಿಗಳು ಭಾನುವಾರ ಸೇರಿದಂತೆ ಯಾವುದೇ ರಜೆ ತೆಗೆದುಕೊಳ್ಳಬಾರದು ಎಂದು ಮಹಾನಗರ ಪಾಲಿಕೆ ಸೂಚನೆ ನೀಡಿದೆ. ಇದರಿಂದ ಅಧಿಕಾರಿಗಳು ಭಾನುವಾರವೂ ಕೆಲಸ ಮಾಡಬೇಕಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications