ಅರಬ್ಬೀ ಸಮುದ್ರ ಪ್ರಕ್ಷುಬ್ಧ; ಪೆಣಂಬೂರು ಬೀಚ್ನಲ್ಲಿ ತೀವ್ರ ಕಡಲ್ಕೊರೆತ
ಮಂಗಳೂರು, ಜುಲೈ 10: ವಾಯುಭಾರ ಕುಸಿತ ಹಿನ್ನಲೆಯಲ್ಲಿ ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದೆ. ಮಂಗಳೂರಿನ ಪೆಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದ್ದು, ಅಲೆಗಳ ಹೊಡೆತಕ್ಕೆ ಹಲವೆಡೆ ಕಡಲ್ಕೊರೆತವಾಗಿದೆ.
ಪೆಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತವಾಗಿದ್ದು, ಸಮುದ್ರ ಬದಿಯ ಅಂಗಡಿಗಳಿಗೂ ಭಾರೀ ಹಾನಿಯಾಗಿದೆ. ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶವಿದ್ದರೂ ಪಣಂಬೂರು ಬೀಚ್ಗೆ ಆಗಮಿಸಿರುವ ಪ್ರವಾಸಿಗರು, ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ.

ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಮಾತ್ರ ಇದನ್ನು ಕ್ಯಾರೇ ಅನ್ನದೇ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಸ್ಥಳದಲ್ಲಿ ನಿಯೋಜಿಸಿದ ಪೊಲೀಸ್ ಸಿಬ್ಬಂದಿ ನಿಯಮ ಮೀರಿದ ಯುವಕರನ್ನು ಚದುರಿಸಿದ್ದಾರೆ.
ಇನ್ನು ಚಂಡಮಾರುತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಶುಕ್ರವಾರ ತಡರಾತ್ರಿ ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ.

Recommended Video
ನವೀನ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿದಿರುವ ಹಿನ್ನಲೆಯಲ್ಲಿ ಮನೆಯ ಸೊತ್ತುಗಳಿಗೆ ಹಾನಿಯಾಗಿದೆ. ಮನೆ ಕುಸಿದ ಸಂಧರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications